Advertisement

ನಿತ್ಯಾನಂದ ಸ್ವಾಮಿ ವಿಚಾರಣೆ 27ಕ್ಕೆ ಮುಂದೂಡಿಕೆ

11:17 AM Sep 15, 2018 | Team Udayavani |

ರಾಮನಗರ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಸೇರಿದಂತೆ 6 ಆರೋಪಿಗಳ ವಿಚಾರಣೆಯನ್ನು ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೆಪ್ಟೆಂಬರ್‌ 27ಕ್ಕೆ ಮುಂದೂಡಿದೆ.

Advertisement

ನಿತ್ಯಾನಂದ ಸ್ವಾಮಿ ಶುಕ್ರವಾರ ಸಹ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ವಿಚಾರಣೆಗಳಿಗೆ ನಿತ್ಯಾನಂದ ಸ್ವಾಮಿ ನಿರಂತರವಾಗಿ ಗೈರಾಗುತ್ತಿದ್ದ ಹಿನ್ನೆಲೆಯಲ್ಲಿ ಸೆ.6ರಂದು ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನಿತ್ಯಾನಂದ ಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಈ ವೇಳೆ ಬಂಧನ ಪ್ರಕ್ರಿಯೆ ನಡೆಸದಂತೆ ಹೈಕೋರ್ಟ್‌ ಮೌಖೀಕ ಆದೇಶ ನೀಡಿ ಪ್ರಕರಣವನ್ನು ಸೆ.17ಕ್ಕೆ ಮುಂದೂಡಿದೆ. ಈ ಮೌಖೀಕ ಆದೇಶದ ಹಿನ್ನೆಲೆ ಹಾಗೂ ಸೆ.17ರಂದು ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇರುವ ಕಾರಣ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆಯನ್ನು ಸೆ.29ಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next