Advertisement

ನಿವಾರ್ ಚಂಡಮಾರುತ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ, ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ

11:25 AM Nov 25, 2020 | keerthan |

ಮೈಸೂರು: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿರುವ ನಿವಾರ್ ಚಂಡಮಾರುತ ಪರಿಣಾಮ ರಾಜ್ಯದ ಮೇಲೂ ಬೀರಲಿರುವ ಕಾರಣ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ನಾವು ನೀವು ಚಂಡಮಾರುತ ತಡೆಯಲು ಆಗುವುದಿಲ್ಲ. ಆದರೂ ಅಗತ್ಯ ಕ್ರಮ ಕೈಗೊಳ್ಳಲು‌ ಸೂಚಿಸಿದ್ದೇನೆ. ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದರು.

ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಮಾತನಾಡಿದ ಅವರು, ಇಂದು ಇನ್ನೂ 25-30 ನಿಗಮ ಮಂಡಳಿಗಳ ನೇಮಕ ಆದೇಶ ಬರಲಿದೆ. ಎಲ್ಲಾ ಪಟ್ಟಿ ಕೊಟ್ಟು ಬಂದಿದ್ದೇನೆ. ಸಂಜೆಯ ಒಳಗೆ ಆದೇಶ ಬರಲಿದೆ ಎಂದರು.

ಈ ಬಾರಿ ಯಾರಿಗೆಲ್ಲಾ ಅವಕಾಶ ಕೈ ತಪ್ಪಿದೆಯೊ ಅವರಿಗೆ ಮುಂದಿನ ಹಂತದಲ್ಲಿ ಪರಿಶೀಲಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next