Advertisement

ಹಾನಗಲ್ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ಗೆ ಬಿ ಫಾರಂ ನೀಡಿದ ಕುಮಾರಸ್ವಾಮಿ

05:02 PM Sep 30, 2021 | Team Udayavani |

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಈಗಾಗಲೇ ಚಟುವಟಿಕೆಗಳನ್ನು ಆರಂಭಿಸಿದೆ. ಈ ಮಧ್ಯೆ ಹಾನಗಲ್ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ಅವರಿಗೆ ಜೆಡಿಎಸ್ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿ ಫಾರಂ ನೀಡಿದರು.

Advertisement

ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಜ್ ಶೇಕ್ ಅವರ ಹೆಸರನ್ನು ಈ ಹಿಂದೆಯೇ ಕುಮಾರಸ್ವಾಮಿಯವರು ಘೋಷಣೆ ಮಾಡಿದ್ದರು. ಇಂದು ನಿಯಾಜ್ ಶೇಕ್ ಅವರು ಬಿ ಫಾರಂ ಪಡೆದರು.

ಇದನ್ನೂ ಓದಿ:ಹಾನಗಲ್ಲ ಉಪಚುನಾವಣೆ| ಟಿಕೆಟ್‌ ಪಡೆಯಲು ಆಕಾಂಕ್ಷಿಗಳ ಪೈಪೋಟಿ

2018ರ ಚುನಾವಣೆಯಲ್ಲಿ ಹಾನಗಲ್ಲ ಕ್ಷೇತ್ರದಿಂದ ಗೆದ್ದಿದ್ದ ಸಿ.ಎಂ. ಉದಾಸಿ ಅವರು ಕಳೆದ ಜೂ. 8ರಂದು ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಅ. 30ರಂದು ಮತದಾನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next