Advertisement

ಜೂ. 5ರವ ರೆಗೆ ಚಿದು ನಿರಾಳ

06:00 AM May 31, 2018 | Team Udayavani |

ನವದೆಹಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಡೀಲ್‌ ಪ್ರಕರಣದಲ್ಲಿ ಮಾಜಿ ಸಚಿವ ಪಿ.ಚಿದಂಬರಂ ವಿರುದ್ಧ ಜೂ.5ರ ವರೆಗೆ ಕ್ರಮ ಕೈಗೊಳ್ಳದಂತೆ ಸಿಬಿಐನ ವಿಶೇಷ ಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಯಾವುದೇ ಕ್ರಮ ಕೈಗೊಳ್ಳಕೂಡದು ಎಂದು ಕಾಂಗ್ರೆಸ್‌ ನಾಯಕ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ ನ್ಯಾಯಾಧೀಶ ಓ.ಪಿ.ಸೈನಿ ಬುಧವಾರ ಈ ಆದೇಶ ನೀಡಿದ್ದಾರೆ. ಚಿದಂಬರಂ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್‌ ಮನು ಸಿಂ Ì, ಕಪಿಲ್‌ ಸಿಬಲ್‌ ವಾದಿಸಿದ್ದರು. 

Advertisement

ಇದೇ ವೇಳೆ ಐಎನ್‌ಎಕ್ಸ್‌ ಮಾಧ್ಯಮ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆಗೆ ಅನುಮತಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆಯೂ ಸಿಬಿಐನ ಮುಂದಿನ ತನಿಖಾ ಕ್ರಮಗಳಿಂದ ರಕ್ಷಣೆ ನೀಡುವಂತೆ ದೆಹಲಿ ಹೈಕೋರ್ಟ್‌ಗೆ ಚಿದಂಬರಂ ಅರ್ಜಿ ಸಲ್ಲಿಸಿದ್ದಾರೆ. ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ನೇತೃತ್ವದ ನ್ಯಾಯಪೀಠದ ಮುಂದೆ ಅದು ಗುರುವಾರ ವಿಚಾರಣೆಗೆ ಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next