Advertisement

ಇನ್ನು ಮುಂದೆ ಜೆಡಿಎಸ್ ಜೊತೆ ಮೈತ್ರಿ ಇಲ್ಲ : ಸಿದ್ದರಾಮಯ್ಯ

05:23 PM Mar 14, 2021 | Team Udayavani |

ಮೈಸೂರು : ಇನ್ನು ಮುಂದೆ ಜೆಡಿಎಸ್ ಜೊತೆ ಕಾಂಗ್ರೆಸ್ ಯಾವುದೇ ಮೈತ್ರಿ ಇಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳೀಯವಾಗಿ ಅವರು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೆ ಇನ್ನು ಮುಂದೆ ಮೈತ್ರಿ ಇಲ್ಲ ಎಂದರು.

ರಮೇಶ್ ಜಾರಕಿಹೊಳಿ ಸಿ.ಡಿ.ಪ್ರಕರಣ ತನಿಖೆ ನಡೆಯುತ್ತಿದೆ, ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿ. ಡಿಕೆಶಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದು ಅವರಿಗೆ ಅನ್ನಿಸಿರಬಹುದು. ನನ್ನನ್ನು ಸಿಕ್ಕಿಸುತ್ತಿದ್ದಾರೆ ಅಂತ ಡಿಕೆಶಿಯೇ ಹೇಳಿದ್ದಾರೆ. ಈಗ ತನಿಖೆ ನಡೆಯುತ್ತಿದೆ. ಇಂತಹ ಪ್ರಕರಣಗಳಿಂದ ರಾಜಕಾರಣಿಗಳ ಮಾನ ಮರ್ಯಾದೆ ಹೋಗುತ್ತೆ. ಜನರು ರಾಜಕಾರಣಿಗಳ ಬಗ್ಗೆ ಹಗುರವಾಗಿ ಮಾತನಾಡಲು ಶುರು ಮಾಡ್ತಾರೆ. ಆಗ ನಾವೇನು ಮಾಡೋಕಾಗಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next