Advertisement

ನಮ್ಮ ಪ್ರತಿಭಟನೆಯಲ್ಲಿ ಯಾವುದೇ ದೇಶವಿರೋಧಿ ಶಕ್ತಿಗಳು ಸೇರಿಕೊಂಡಿಲ್ಲ: ಕಿಸಾನ್ ಯೂನಿಯನ್

06:48 PM Dec 12, 2020 | Nagendra Trasi |

ನವದೆಹಲಿ:ಕೇಂದ್ರದ ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಯಾವುದೇ ಸಮಾಜಘಾತುಕ ಶಕ್ತಿಗಳು ಸೇರಿಕೊಂಡಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯ್ಟ್ ಶನಿವಾರ(ಡಿ.12, 2020) ತಿಳಿಸಿದ್ದಾರೆ. ಒಂದು ವೇಳೆ ಕೇಂದ್ರ ಗುಪ್ತಚರ ದಳಕ್ಕೆ ಅಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರನ್ನು ಬಂಧಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Advertisement

ಒಂದು ವೇಳೆ ರೈತರ ಪ್ರತಿಭಟನೆಯಲ್ಲಿ ದೇಶ ವಿರೋಧಿ ಶಕ್ತಿಗಳು ಶಾಮೀಲಾಗಿದ್ದು, ಕಂಡುಬಂದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅವರನ್ನು ಸೆರೆ ಹಿಡಿಯಬೇಕು. ನಿಷೇಧಿತ ಸಂಘಟನೆಯ ಜನರು ರೈತರ ಜತೆ ಇದ್ದಿರುವ ಮಾಹಿತಿ ಇದ್ದರೆ ಕೂಡಲೇ ಕ್ರಮ ಕೈಗೊಳ್ಳಿ. ನಮಗೆ ಅಂತಹ ಯಾವುದೇ ವ್ಯಕ್ತಿಗಳು ಕಂಡು ಬಂದಿಲ್ಲ ಎಂದು ರಾಕೇಶ್ ತಿಳಿಸಿದ್ದಾರೆ.

ದಿಲ್ಲಿ-ಗಾಜಿಪುರ್ ಗಡಿಯಲ್ಲಿ ಪ್ರತಿಭಟನಾನಿರತ ರೈತರು ದೆಹಲಿಯತ್ತ ಕಾಲ್ನಡಿಗೆಯಲ್ಲಿ ತೆರಳಲು ಆರಂಭಿಸಿದೆ. ನಮ್ಮ ಅಹವಾಲನ್ನು ಆಲಿಸಿ ಎಂಬ ಸಂದೇಶವನ್ನು ನಾವು ಸರ್ಕಾರಕ್ಕೆ ಕಳುಹಿಸಬೇಕಾಗಿದೆ ಎಂದು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪಂಜಾಬ್, ಹರ್ಯಾಣ ರೈತರು ದೆಹಲಿಯ ವಿವಿಧ ಗಡಿಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಶನಿವಾರ(ಡಿ.12, 2020) 17ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಮತ್ತು ರೈತರ ನಡುವಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next