Advertisement

ಶಾಸಕ ಗಣೇಶ್‌ಗೆ ನೋ ಬೇಲ್‌

01:27 AM Mar 26, 2019 | Sriram |

ಬೆಂಗಳೂರು: ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಕಂಪ್ಲಿ ಶಾಸಕ ಜೆ.ಎನ್‌ ಗಣೇಶ್‌ಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

Advertisement

ಗಣೇಶ್‌ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೋಮವಾರ ಆದೇಶ ಪ್ರಕಟಿಸಿದ್ದು, ಆರೋಪಿ ಗಣೇಶ್‌ಗೆ ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಜಾಮೀನು ಅರ್ಜಿವಜಾ ಹಿನ್ನೆಲೆಯಲ್ಲಿ ಆರೋಪಿ ಶಾಸಕ ಗಣೇಶ್‌ ಮತ್ತಷ್ಟು ದಿನಗಳ ಕಾಲ ಜೈಲಿನಲ್ಲಿಯೇ ಕಳೆಯಲಿದ್ದಾರೆ.

ಸದ್ಯದಲ್ಲಿಯೇ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next