Advertisement

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

12:30 AM Jul 05, 2024 | Team Udayavani |

ಆಸ್ಟಾನಾ: ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಗೌರವಿಸಿ ಮತ್ತು ಗಡಿ ಅತಿಕ್ರಮಣ ಮಾಡುವುದು ಬೇಡ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಚೀನಕ್ಕೆ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ. ಕಜಕಿಸ್ಥಾನದ ಆಸ್ಟಾನದಲ್ಲಿ ಶಾಂಘೈ ಸಹಕಾರ ಒಕ್ಕೂಟದ ಸಭೆಯ ನಡುವೆ ಚೀನ ವಿದೇಶಾಂಗ ಸಚಿವ ವಾಂಗ್‌ ಇ ಜತೆಗೆ ನಡೆಸಿದ ಮಾತುಕತೆ ವೇಳೆ ಈ ಅಂಶ ಪ್ರಸ್ತಾವಿಸಲಾಗಿದೆ.

Advertisement

ಪೂರ್ವ ಲಡಾಖ್‌ ಗಡಿತಂಟೆಯನ್ನು ಬಗೆಹರಿಸಲು ಮಾತುಕತೆಯೇ ಪರಿಹಾರವೆಂದು ಇಬ್ಬರು ನಾಯಕರು ಸಹಮತಕ್ಕೆ ಬಂದಿದ್ದಾರೆ. ಆದರೆ ಎಲ್‌ಎಸಿ ಗೌರವಿಸಬೇಕು ಎಂದು ಸಚಿವ ಜೈಶಂಕರ್‌ ಹೇಳಿದ್ದಾರೆ. ಪರಸ್ಪರ ಗೌರವ, ಪರಸ್ಪರ ಸೂಕ್ಷ್ಮತೆ, ಹಿತಾಸಕ್ತಿ ಯನ್ನು ಅರಿಯುವುದರಿಂದ ಭಾರತ ಹಾಗೂ ಚೀನ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸುಧಾರಿಸುತ್ತವೆ ಎಂದು ಟ್ವೀಟ್‌ ಮಾಡಿದ್ದಾರೆ. ಉಭಯ ಸಚಿ ವರ ಬಗ್ಗೆ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಇಬ್ಬರು ನಾಯಕರು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದಿದೆ. ಪೂರ್ವ ಲಡಾಖ್‌ನಲ್ಲಿ ಚೀನ ಸೇನೆ ದಾಳಿ ನಡೆಸಿದ ಬಳಿಕ ಭಾರತ ಮತ್ತು ಚೀನದ ನಡುವಿನ ಸಂಬಂಧ ಹದಗೆಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next