Advertisement

ಗಡಿ ಬಂದ್‌ ಸಡಿಲಿಕೆ ಇಲ್ಲ : ಬಿಎಸ್‌ವೈ

10:21 AM Apr 05, 2020 | Sriram |

ಬೆಂಗಳೂರು: ಕೋವಿಡ್ 19  ಭೀತಿ ಹೆಚ್ಚಾಗಿರುವುದರಿಂದ ಕರ್ನಾಟಕ-ಕೇರಳ ಗಡಿ ಬಂದ್‌ ಸಡಿಲಗೊಳಿಸಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Advertisement

ಕರ್ನಾಟಕ-ಕೇರಳ ಗಡಿ ತೆರವು ಸಂಬಂಧ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ, ಕರ್ನಾಟಕದ ಪ್ರತಿಯೊಬ್ಬರ ಪ್ರಾಣ ರಕ್ಷಣೆ ನನ್ನ ಸರಕಾರದ ಹೊಣೆಯಾಗಿದೆ ಎಂದು ಹೇಳಿದರು.

ಗಂಭೀರ ಅಧ್ಯಯನ
ಗಡಿ ಬಂದ್‌ ಮಾಡುವ ನಿರ್ಧಾರವನ್ನು ಏಕಾಏಕಿ ತೆಗೆದು ಕೊಂಡಿಲ್ಲ. ಗಡಿ ಭಾಗದ ಜನರ ಆರೋಗ್ಯ ಸಮಸ್ಯೆಯನ್ನು ಗಂಭೀರವಾಗಿ ಅಧ್ಯಯನ ಮಾಡಿ, ಸಂಬಂಧಿಸಿದ ಪೂರಕ ದಾಖಲೆಗಳ ಆಧಾರದ ಮೇಲೆ ಗಡಿ ಮುಚ್ಚಲಾಗಿದೆ. ಗಡಿ ಬಂದ್‌ ತೆರವುಗೊಳಿಸಿದರೆ ಕರ್ನಾಟಕದ ಸಾವಿರಾರು ಮುಗ್ಧ ಜನರ ಆರೋಗ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ವಾಪಸ್‌ ಪಡೆಯವ ನಿರ್ಧಾರ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next