Advertisement

ಸಿಗದ ಗ್ರೀನ್ ಸಿಗ್ನಲ್, ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ; ಬಿಎಸ್ ವೈ ಬೆಂಗಳೂರಿಗೆ ವಾಪಸ್

08:55 AM Aug 08, 2019 | Team Udayavani |

ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಸರಕಾರದಲ್ಲಿ ಸಚಿವ ಸಂಪುಟ ರಚನೆಯಾಗಿಲ್ಲ ಎಂಬ ಟೀಕೆಯ ಬೆನ್ನಲ್ಲೇ ಹೈಕಮಾಂಡ್ ಗ್ರೀನ್ ಸಿಗ್ನಲ್ ಪಡೆಯಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಾಸೆಗೊಳ್ಳುವಂತೆ ಆಗಿದೆ.

Advertisement

ಬಿಎಸ್ ಯಡಿಯೂರಪ್ಪ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೈಕಮಾಂಡ್ ಮುಖಂಡರನ್ನು ಭೇಟಿಯಾಗಿ, ಸಚಿವ ಸಂಪುಟ ರಚನೆ ಕುರಿತು ಚರ್ಚಿಸಿದ್ದರು. ಆದರೆ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ವರದಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಮುಂದೂಡಿಕೆಯಾಗಿದ್ದು, 2 ದಿನಗಳ ಬಳಿಕ ದೆಹಲಿಗೆ ವಾಪಸ್ ಬನ್ನಿ ಎಂದು ಬಿಜೆಪಿ ಹೈಕಮಾಂಡ್ ಬಿಎಸ್ ವೈಗೆ ಸೂಚನೆ ನೀಡಿದೆ.

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ದೆಹಲಿ ಕಾರ್ಯಕ್ರಮ ರದ್ದು ಮಾಡಿ ತುರ್ತಾಗಿ ಬೆಂಗಳೂರಿನತ್ತ ಹೊರಟಿದ್ದಾರೆ. ಮಧ್ಯಾಹ್ನ ಬೆಂಗಳೂರು ತಲುಪಲಿದ್ದು, ಬಳಿಕ ಮಳೆ, ಪ್ರವಾಹ ಸಂಬಂಧಿತ ವಿಷಯದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next