Advertisement

ಕೇಂದ್ರದ ಪರಿಹಾರ ಮರೀಚಿಕೆ: ದಿನೇಶ್‌

11:11 PM Aug 13, 2019 | Lakshmi GovindaRaj |

ಬೆಂಗಳೂರು:“ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ, ಕೇಂದ್ರ ಸಚಿವ ಸಂಪುಟದಲ್ಲಿ ಯಾವುದೇ ನಿರ್ಣಯ ಕೈಗೊಳ್ಳದಿರುವುದರಿಂದ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರ ಮರೀಚಿಕೆಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಾಧ್ಯಮಗಳೊಂ ದಿಗೆ ಮಾತನಾಡಿ, “ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ 1 ಲಕ್ಷ ಕೋಟಿಗೂ ಅಧಿಕ ಹಾನಿ ಸಂಭವಿಸಿದೆ.

Advertisement

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸಿದರೂ, ತುರ್ತು ಪರಿಹಾರ ಘೋಷಣೆ ಮಾಡದೇ ವಾಪಸ್‌ ಆಗಿದ್ದಾರೆ. ಮಂಗಳವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲೂ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಳ್ಳ ದಿರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದರು. ರಾಜ್ಯದಲ್ಲಿ 26 ಜನ ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ಕೇಂದ್ರ ಸಂಪುಟದಲ್ಲಿ ರಾಜ್ಯದ ಸಚಿವರಿದ್ದಾರೆ. ಅವರೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಸಂಪುಟದಲ್ಲಿ ಪ್ರಸ್ತಾಪ ಮಾಡಿರುವುದು ಅನುಮಾನವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next