Advertisement

ಬಂದ್‌ಗೆ ಅವಕಾಶವಿಲ್ಲ: ರಾಮಲಿಂಗಾರೆಡ್ಡಿ

11:18 AM Feb 02, 2018 | Team Udayavani |

ಬೆಂಗಳೂರು: ಫೆಬ್ರವರಿ 4 ರಂದು ಬೆಂಗಳೂರು ಬಂದ್‌ ಮಾಡಲು ಯಾವುದೇ ಸಂಘಟನೆಗೆ ಅವಕಾಶವಿಲ್ಲ. ಪ್ರತಿಭಟನೆ ಮಾಡುವವರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿ, ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದು  ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪ್ರಧಾನಿ ಬೆಂಗಳೂರಿಗೆ ಬಂದಾಗ ಸೂಕ್ತ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ.

Advertisement

ನರೇಂದ್ರ ಮೋದಿಯವರು ಬಿಜೆಪಿಯವರಿಗೆ ಮಾತ್ರ ಪ್ರಧಾನಿಯಲ್ಲ. ಇಡೀ ದೇಶದ ಪ್ರಧಾನಿ. ಪ್ರಧಾನಿ ಬಂದಾಗ ಗೌರವ ಕೊಡುವುದು ನಮ್ಮ ಧರ್ಮ. ಪ್ರಧಾನಿ ಮೋದಿ ಆಗಮಿಸಿದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲಿಸ್‌ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next