Advertisement

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

06:51 PM Mar 27, 2024 | Team Udayavani |

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ. ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರೊಂದಿಗೆ ಮಾತನಾಡುವೆ. ಎಲ್ಲ ಸಮಾಜದ ಸ್ವಾಮೀಜಿಗಳು ನಮ್ಮೊಂದಿಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲ ಸ್ವಾಮೀಜಿಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದೇವೆ. ರಾಜ್ಯದ ಮಠಗಳು ಹಾಗೂ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಯಾವ ಕಾರಣಕ್ಕೆ ದಿಂಗಾಲೇಶ್ವರ ಶ್ರೀಗಳು ಮಾತನಾಡಿದ್ದಾರೆ ಎಂಬುವುದು ಗೊತ್ತಿಲ್ಲ. ಅವರ ಮತದೊಂದಿಗೆ 35 ವರ್ಷಗಳ ಸಂಬಂಧವಿದೆ. ಅವರಾಡಿದ ಮಾತುಗಳು ನಮಗೆ ಆಶೀರ್ವಾದ ಇದ್ದಂತೆ. ಈ ಕುರಿತು ಶ್ರೀಗಳೊಂದಿಗೆ ಮಾತನಾಡುವೆ ಎಂದರು.

ದೇವೇಗೌಡರಿಗೆ ರಾಜ್ಯದಲ್ಲಿ ಪ್ರಭಾವ ಇದೆ. 28 ಸ್ಥಾನ ಗೆಲ್ಲಲು ಸಹಕಾರ ಸಿಗಲಿದೆ. ತೇಜಸ್ವಿನಿಗೌಡ ಅವರಿಗೆ ಪಕ್ಷ ಸ್ಥಾನ ಮಾನ ನೀಡಿತ್ತು. ಈಗ ಅದರ ಋಣ ಈ ರೀತಿ ತೀರಿಸುತ್ತಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಇಡೀ ಜಗತ್ತು ಮೆಚ್ಚುತ್ತಿದೆ. ದೇಶದ ಜನರಿಗೆ ನೀಡಿರುವ ಯೋಜನೆಗಳು ಹಾಗೂ ರಾಜ್ಯದಲ್ಲಿ ನಮ್ಮ ಸರಕಾರದ ಸಾಧನೆಗಳು ನಮ್ಮ ಗೆಲುವಿಗೆ ಶ್ರೀರಕ್ಷೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next