Advertisement

ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ,ಎಚ್‌ಡಿಕೆ ಒಳ್ಳೆಯ ಕೆಲಸ ಮಾಡ್ತಿದ್ದಾರೆ

09:48 AM May 09, 2019 | Team Udayavani |

ಹುಬ್ಬಳ್ಳಿ: ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ. ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಮಾಡುವುದಿಲ್ಲ ಎಂದು ಎಲ್ಲಾ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆ ಎಳೆದಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ಅಭಿಮಾನದಿಂದ ನಾನು ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ, ತಪ್ಪಾ ಎಂದು ಪ್ರಶ್ನಿಸಿದರು.

ಆದ್ರೆ,ಕೊಟ್ರೆ,ಇದ್ರೆ,ಇದಕ್ಕೆಲ್ಲಾ ಉತ್ತರವಿಲ್ಲ ಎಂದರು.

ಎಂ.ಬಿ.ಪಾಟೀಲ್‌ ,ಡಾ.ಸುಧಾಕರ್‌ ಸೇರಿದಂತೆ ಕೆಲ ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದಿದ್ದರು. ಆ ಬಳಿಕ ಹೊಸ ಚರ್ಚೆ ಆರಂಭವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next