Advertisement
ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ದಕ್ಷಿಣ ಭಾರತ ಲೆಕ್ಕ ಪರಿಶೋಧಕ ವಿದ್ಯಾರ್ಥಿಗಳ ಸಂಘದ ಹುಬ್ಬಳ್ಳಿ ಶಾಖೆ ಆಶ್ರಯದಲ್ಲಿ ವಿದ್ಯಾನಗರದ ಬಿವಿಬಿ ತಾಂತ್ರಿಕ ಮಹಾವಿದ್ಯಾಲಯದ ದೇಶಪಾಂಡೆ ಫೌಂಡೇಶನ್ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಲೆಕ್ಕ ಪರಿಶೋಧಕ ವಿದ್ಯಾರ್ಥಿಗಳ ಸಮ್ಮೇಳನ “ಚೈತನ್ಯ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ಸಾಧನೆಗೆ ಇರುವ ವಿಫುಲ ಅವಕಾಶಗಳನ್ನು ಬಳಸಿಕೊಳ್ಳಬೇಕು. ವೃತ್ತಿಯಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು. ಯಾವುದೇ ರೀತಿಯ ಒಪ್ಪಂದಗಳಿಗೆ ಒಳಗಾಗಿ ತತ್ವಾದರ್ಶಗಳನ್ನು ಬಲಿಕೊಡಬಾರದು ಎಂದರು. ಪ್ರಚೋದನಾ ಭಾಷಣ ಮಾಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಘಟನೆಗಳು ಹೆಚ್ಚಾಗುತ್ತಿವೆ.
ಮತ್ತೂಬ್ಬರಿಗೆ ಜೈಕಾರ ಹಾಕಿ, ಮತ್ತೂಬ್ಬರ ಜೀವನ ನಿರ್ಮಿಸಲು ಹೋರಾಡುವ ಬದಲು ತಮ್ಮ ಜೀವನ ಸುಭದ್ರವಾಗಿ ನಿರ್ಮಿಸಿಕೊಳ್ಳಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ತಮಗಷ್ಟೇ ಜೀವಿಸುವುದಕ್ಕಾಗಿ ಜನಿಸಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
ತಮ್ಮನ್ನು ಸಾಕಿ, ಸಲುಹಿದ ತಂದೆ- ತಾಯಿಗಳನ್ನು ಸುಖವಾಗಿ ನೋಡಿಕೊಳ್ಳುವ, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದೆ. ಲೆಕ್ಕ ಪರಿಶೋಧಕರ ಸಂಘದ ನಂದರಾಜಖಟಾವಕರ, ಉಪಾಧ್ಯಕ್ಷ ರಾಘವೇಂದ್ರ ಜೋಶಿ, ಲೆಕ್ಕಪರಿಶೋಧಕ ನಟರಾಜ್ ಮೂರಶಿಳ್ಳಿ, ಕಾರ್ತಿಕ ಶೆಟ್ಟಿ, ಕೆ.ವಿ.ದೇಶಪಾಂಡೆ ಸೇರಿದಂತೆ ಇತರರು ಇದ್ದರು.