Advertisement

ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ

03:59 PM May 30, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಂದಿನ ಭಾನುವಾರ ( ಮೇ 31) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಗಳು, ಸಾರ್ವಜನರಿಕರಿಂದ ಈ ರೀತಿಯ ಬೇಡಿಕೆಗಳು ಕಂಡು ಬಂದ ಹಿನ್ನಲೆಯಲ್ಲಿ ನಾಳೆ ಲಾಕ್ ಡೌನ್ ಇರುವುದಿಲ್ಲ. ರಾತ್ರಿ ಏಳು ಗಂಟೆಯಿಂದ ಬೆಳಿಗ್ಗೆ ಏಳು ಗಂಟೆಯವರೆಗಿನ ಕರ್ಫ್ಯೂ ಮಾತ್ರ ಮುಂದುವರಿಯಲಿದೆ ಎಂದಿದ್ದಾರೆ.

ಈ ಆದೇಶವು ಮೇ 31ಕ್ಕೆ ಮಾತ್ರ ಸೀಮಿತವಾಗಿದ್ದು, ನಂತರದ ನಿರ್ಧಾರವನ್ನು ಕೇಂದ್ರ ಸರ್ಕಾರ ಮುಂದಿನ ಮಾರ್ಗಸೂಚಿಯ ನಂತರ ಕೈಗೊಳ್ಳಬಹುದಾದದ ಸಾಧ್ಯತೆಯಿದೆ.

ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಹೇರಿದ ನಂತರ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ಸಂಚಾರಕ್ಕೂ ಅನುಮತಿ ನಿರಾಕರಿಸಲಾಗಿತ್ತು. ಆಟೋ, ಸರಕಾರಿ ಬಸ್ ಸೇರಿದಂತೆ ಎಲ್ಲವೂ ಬಂದ್ ಮಾಡುವಂತೆ ಹೇಳಲಾಗಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next