Advertisement

ಒಗ್ಗಟ್ಟಿನ ಹೋರಾಟ; ಕಳೆದ 14 ದಿನಗಳಿಂದ 60 ಜಿಲ್ಲೆಗಳಲ್ಲಿ ಕೋವಿಡ್ 19 ಪ್ರಕರಣ ವರದಿಯಾಗಿಲ್ಲ

10:04 AM Apr 22, 2020 | Nagendra Trasi |

ನವದೆಹಲಿ:ಕೋವಿಡ್ 19 ವೈರಸ್ ವಿರುದ್ಧ ದೇಶ ಒಗ್ಗಟ್ಟಿನಿಂದ ಹೋರಾಡುತ್ತಿರುವ ಪರಿಣಾಮದಿಂದ ಧನಾತ್ಮಕ ಫಲಿತಾಂಶ ಬಂದಿತ್ತು ಕಳೆದ 14 ದಿನಗಳಿಂದ ದೇಶದ 60 ಜಿಲ್ಲೆಗಳಲ್ಲಿ ಒಂದೇ ಒಂದು ಕೋವಿಡ್ 19 ವೈರಸ್ ನ ಹೊಸ ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Advertisement

ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ, ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಸಮಾಧಾನಕರ ಮುನ್ನಡೆ ಎಂಬಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಪ್ರಮಾಣವು 7.5 ದಿನಗಳಿಗೆ ಇಳಿಕೆಯಾಗಿತ್ತು ಎಂದು ತಿಳಿಸಿತ್ತು.

ವಿಶೇಷವೆಂದರೆ, ಕರ್ನಾಟಕ ಸೇರಿದಂತೆ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತಲೂ ಹೆಚ್ಚಿದೆ. ಕರ್ನಾಟಕದಲ್ಲಿ ಸೋಂಕು ದ್ವಿಗುಣಗೊಳ್ಳುವ ಅವಧಿ 9.2 ದಿನಗಳಾಗಿದ್ದರೆ, ದೆಹಲಿಯಲ್ಲಿ ಇದು 8.5 ದಿನಗಳು ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ತಿಳಿಸಿದ್ದಾರೆ.

ಲಾಕ್‌ಡೌನ್‌ ಗೂ ಮುನ್ನ ಸೋಂಕು 3.5 ದಿನಗಳಿಗೊಮ್ಮೆ ದ್ವಿಗುಣಗೊಳ್ಳುತ್ತಿತ್ತು. ಆದರೆ, ಈಗ ಜನರ ಚಲನವಲನಗಳಿಗೆ ನಿರ್ಬಂಧದಿಂದಾಗಿ ಕಡಿವಾಣ ಬಿದ್ದಿರುವ ಕಾರಣ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಲು 7.5 ದಿನಗಳು ಬೇಕಾಗುತ್ತಿವೆ ಎಂದು ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next