Advertisement

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

11:14 PM Nov 19, 2022 | Team Udayavani |

ಮೈಸೂರು: ಸರಕಾರಿ ಜಮೀನು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್‌ ಪ್ರಕರಣ ದಾಖಲಿಸಬಾರದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸೂಚಿಸಿದ್ದಾರೆ.

Advertisement

ಎಚ್‌.ಡಿ. ಕೋಟೆ ಭೀಮ ನಕೊಲ್ಲಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ಸರಕಾರಿ ಜಮೀನು ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತ್ತಿತ್ತು. ಅವರ ಮೇಲೆ ಪ್ರಕರಣ ದಾಖಲಿಸುತ್ತಿದ್ದುದರಿಂದ ಜಾಮೀನಿಗಾಗಿ ಕೋರ್ಟ್‌ಗೆ ಅಲೆಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಅಂಥ ಸ್ಥಿತಿ ಇಲ್ಲ ಎಂದರು.

ಕೃಷಿ ಭೂಮಿಯಲ್ಲಿ ಕೋಳಿ ಫಾರ್ಮ್ ನಿರ್ಮಾಣಕ್ಕಾಗಿ ಭೂ ಪರಿವರ್ತನೆ ಮಾಡಲು ಸಾಕಷ್ಟು ಸಮಯ ವ್ಯರ್ಥವಾಗುತ್ತಿತ್ತು. ಈಗ ಕೋಳಿ ಸಾಕಣಿಕೆಯನ್ನೂ ಕೃಷಿ ಎಂದೇ ಪರಿಗಣಿಸಲಾಗಿದೆ. ಹಾಗೆಯೇ ಜಮೀನು ಖಾತೆ ಮಾಡಲು 30 ದಿನ ಇದ್ದ ಅವಧಿಯನ್ನು ಇಳಿಸಿ ಏಳು ದಿನಗಳಿಗೆ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಂದಿ ಸರಕಾರದಿಂದ ಪಡೆದ ಭೂಮಿಯಲ್ಲಿ ಮನೆ ಕಟ್ಟಲು ಜಿಲ್ಲಾಧಿಕಾರಿಗಳ ಹಂತದಲ್ಲೇ ಅನುಮತಿ ಪಡೆಯುವಂತೆ ಮಾಡಲಾಗಿದೆ. ಆರು ತಿಂಗಳು ಇದ್ದ ಭೂ ಪರಿವರ್ತನೆ ಅವಧಿಯನ್ನು ಏಳು ದಿನಗಳಿಗೆ ಇಳಿಸಿದ್ದು, ರೈತರ ಕೆಲಸ ಶೀಘ್ರದಲ್ಲೇ ಆಗುವಂತೆ ಮಾಡಿದ್ದೇವೆ ಎಂದು ಅಶೋಕ್‌ ಹೇಳಿದರು.

ಕಾಡಂಚಿನ ಭಾಗದಲ್ಲಿ 52 ವರ್ಷದಿಂದ ಉಳುಮೆ ಮಾಡಿದವರಿಗೆ ಹಕ್ಕು ಪತ್ರ ನೀಡಿಲ್ಲ. ಬೆಂಗಳೂರಿನಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರು ಜಿಲ್ಲೆಯ 3,060 ರೈತರಿಗೆ 2.55 ಕೋಟಿ ರೂ. ಬೆಳೆ ಹಾನಿ ಪರಿಹಾರ ನೀಡ ಲಾಗಿದೆ. 5,640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ರೂ. ಹಾಗೂ ಕೋವಿಡ್‌ನಿಂದ ಮೃತಪಟ್ಟ 3,664 ಕುಟುಂಬದವರಿಗೆ 27.35 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಈಗ ದೂರವಾಣಿ ಮೂಲಕ “ಹಲೋ ಕಂದಾಯ ಸಚಿವರೇ’ ಎಂದು ಕರೆ ಮಾಡಿ 72 ತಾಸುಗಳ ಒಳಗಾಗಿ ವೃದ್ಧಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು.

Advertisement

“ಅಮಾಸೆ’ಗೆ
ಹುಣ್ಣಿಮೆ ಬೆಳಕು
ಭೀಮನಕೊಲ್ಲಿ ಮಹದೇಶ್ವರ ದೇಗುಲದ ಆವರಣದಲ್ಲಿ ನಡೆದ ಸರ ಕಾರದ ವಿವಿಧ ಸೌಲಭ್ಯ ವಿತರಣ ಕಾರ್ಯಕ್ರಮದಲ್ಲಿ ಒಂದು ಕಾಲು ಕಳೆದುಕೊಂಡಿದ್ದ ವಿಶೇಷ ಚೇತನ ಅಮಾಸೆ ಎಂಬವರಿಗೆ ಸಚಿವರು ಸ್ವಹಸ್ತದಿಂದಲೇ ಕೃತಕ ಕಾಲು ಜೋಡಿಸಿ ಶುಭ ಹಾರೈಸಿದರು. ಬಳಿಕ ಸಚಿವರು ಅಮಾಸೆಯನ್ನು ವೇದಿಕೆಯಲ್ಲಿ ನಡೆದಾಡಿಸಿದರು. ಈ ವೇಳೆ ಮುಗ್ಗರಿಸಿದ ಅಮಾಸೆ ಕೆಳಗೆ ಕುಸಿದರು. ಬಳಿಕ ಸಚಿವರು ಮತ್ತೆ ಕೃತಕ ಕಾಲನ್ನು ಜೋಡಿಸಿ, ಅವರು ಆತ್ಮವಿಶ್ವಾಸದಿಂದ ನಡೆಯುವಂತೆ ಮಾಡಿದರು. ಅನಂತರ ಅವರಿಂದಲೇ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗಮನ ಸೆಳೆದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next