ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು ಇಲ್ಲ ಎಂದರು.
ಪ್ರಕರಣ ಹೆಚ್ಚು ಇರುವ ಕಡೆ ಬಿಗಿ ನಿಯಮ ಮಾಡಿ. ಬೇರೆ ಕಡೆ ಬಿಡಿ. ಇದು ಜನರ ಭಾವನೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ ಎಂದಿದ್ದಾರೆ.
ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂ ಗೆ ವಿರೋಧ ವ್ಯಕ್ತಪಡಿಸಿದ್ದ ಈಶ್ವರಪ್ಪ ಬೆಂಗಳೂರಿನಲ್ಲಿ ನಿಯಮ ಬಿಗಿ ಇರಲಿ ಕೋವಿಡ್ ಕಡಿಮೆ ಇರುವಲ್ಲಿ ಬಿಗಿ ನಿಯಮ ಬೇಡ ಎಂದಿದ್ದರು.