Advertisement

ಸಂಪುಟ ವಿಸ್ತರಣೆ ಕುರಿತು ಸದ್ಯ ಯಾವುದೇ ಚರ್ಚೆ ಇಲ್ಲ: ಸಿಎಂ ಯಡಿಯೂರಪ್ಪ

12:52 PM Jul 10, 2021 | Team Udayavani |

ಕಲಬುರಗಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆ ಬಗ್ಗೆ ಯಾವುದೇ ಚಿಂತನೆ ಕೂಡಾ ನಡೆದಿಲ್ಲಾ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬಂದರೆ ತಮಗೆ ತಿಳಿಸುತ್ತೇನೆ ಎಂದರು.

ಇದನ್ನೂ ಓದಿ:ನಾನು ಮನಸ್ಸು ಮಾಡಿದರೆ ಎಂಎಲ್‌ಎ, ಎಂಪಿ ಆಗುತ್ತೇನೆ: ರಾಕ್‌ಲೈನ್‌ ವೆಂಕಟೇಶ್

ಮಂಡ್ಯ ಸಂಸದೆ ಸುಮಲತಾ ಮತ್ತು ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಈ ರೀತಿ ಕಚ್ಚಾಡಾವುದು ಅವಶ್ಯಕತೆ ಇಲ್ಲ. ಎಲ್ಲರೂ ಸಹೋದರರಂತೆ ಬಾಳುವದನ್ನು ಕಲಿಬೇಕು. ಅಲ್ಲಿನ ಅಭಿವೃದ್ಧಿ ಬಗ್ಗೆ ಎಲ್ಲರು ಒಟ್ಟಾಗಿ ಹೋಗಬೇಕು. ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದು ನನಗೆ ಸಮಾಧಾನವಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

ಕಲಬುರಗಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಆಗಮಿಸಿದ್ದೇನೆ.‌ ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಸದ್ಯ ಕಾಬಿನೆಟ್ ಸಭೆ ನಡೆಸುದಿಲ್ಲ. ಮುಂದೆ ಅದರ ಬಗ್ಗೆ ನೋಡೋಣ ಎಂದು ತೆರೆ ಎಳೆದರು.

Advertisement

Udayavani is now on Telegram. Click here to join our channel and stay updated with the latest news.

Next