Advertisement

Congress ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

11:32 PM Oct 21, 2023 | Team Udayavani |

ಬೆಳಗಾವಿ: ಎಲ್ಲರ ಒಗ್ಗಟ್ಟು ಮತ್ತು ಪರಿಶ್ರಮದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಂಥದ್ದು ಏನಾದರೂ ಇದ್ದರೆ ಹೈಕಮಾಂಡ್‌ ಗಮನಕ್ಕೆ ತರಲಾಗುವುದು ಎಂದು ಲೋಕೋಪ ಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

Advertisement

ನಗ ರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ನನ್ನ ಜತೆಗೆ ಸಾವಿರಾರು ನಾಯಕರು, ಲಕ್ಷಾಂತರ ಕಾರ್ಯಕರ್ತರ ಪಾತ್ರವಿದೆ. ಎಲ್ಲರ ಸಹಕಾರದಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂದರು.

ಪ್ರವಾಸಕ್ಕೆ ಹೋಗಿ ಇನ್ನೊಂದು “ಪವರ್‌ ಸೆಂಟರ್‌’ ಮಾಡಬೇಕೆಂಬ ಉದ್ದೇಶ ನಮ್ಮದಲ್ಲ. ಸಮಾನ ಮನಸ್ಕರು ಪ್ರವಾಸಕ್ಕೆ ಹೋಗಬೇಕೆಂದು ಸಾಕಷ್ಟು ಮೊದಲೇ ತೀರ್ಮಾನಿಸಿದ್ದೆವು. ನಾವು ಎಲ್ಲರೂ ಒಟ್ಟಾದಿಯೇ ಇದ್ದೇವೆ, ಮುಂದೆಯೂ ಇರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೌನವಾಗಿದ್ದರಿಂದ ಬೇರೆ ಸಂದೇಶ ರವಾನೆ ಆಯಿತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಸಂದೇಶವೂ ಇಲ್ಲ. ನಾವೆಲ್ಲ ಒಟ್ಟಾಗಿದ್ದೇವೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ. ಆ ಪಕ್ಷದಲ್ಲಿ ಮೂರು ಹಾಗೂ ಜೆಡಿಎಸ್‌ನಲ್ಲಿ ಎರಡು ಗುಂಪುಗಳಿವೆ. ಒಂದು ಕುಮಾರಸ್ವಾಮಿ ಅವರದ್ದು ಇನ್ನೊಂದು ಸಿಎಂ ಇಬ್ರಾಹಿಂ ಅವರದ್ದು. ನಮ್ಮಲ್ಲಿ ಸ್ವಾಭಾವಿಕವಾಗಿ ಗುಂಪಿದೆ. ಇಲ್ಲ ಎನ್ನುವುದಿಲ್ಲ. ಆದರೆ ಪಕ್ಷದ ವಿಷಯ ಬಂದಾಗ ನಾವೆಲ್ಲ ಒಂದಾಗುತ್ತೇವೆ. ಜಿಲ್ಲೆಯಲ್ಲಿ ಬೇರೆ ಬೇರೆ ಇದ್ದರೂ ಚುನಾವಣೆ ಬಂದಾಗ ಒಂದಾಗುತ್ತೇವೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next