Advertisement

Laxman savadi ಮೇಲೆ ಯಾವುದೇ ಸಂಶಯ- ಅಪನಂಬಿಕೆಯಿಲ್ಲ: ಸಚಿವ ಎಚ್.ಕೆ ಪಾಟೀಲ್

01:26 PM Jan 31, 2024 | Team Udayavani |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ಸು ಹೋಗಬಾರದಿತ್ತು ಎನ್ನುವುದಷ್ಟೇ ನಮ್ಮ ನೋವು. ಆದರೆ ಲಕ್ಷ್ಮಣ ಸವದಿ ಅವರು ಹೇಳಿದಂತೆ ನಡೆದುಕೊಳ್ಳುವವರು. ಅವರ ಮೇಲೆ ಅಪನಂಬಿಕೆ ಹಾಗೂ ಸಂಶಯವಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ತಾವು ಕಾಂಗ್ರೆಸಿನಲ್ಲಿಯೇ ಇರುತ್ತೇನೆ. ಯಾವುದೇ ಕಾರಣಕ್ಕೂ ಬದಲಾವಣೆಯಾಗಲ್ಲ ಎಂದು ಹೇಳಿದ್ದಾರೆ. ಅವರ ಮತ್ತು ನನ್ನ ಒಡನಾಟ ಬಹಳಷ್ಟು ಹಳೆಯದು. ಅವರು ಏನು ಹೇಳುತ್ತಾರೆ ಹಾಗೇ ನಡೆದುಕೊಳ್ಳುತ್ತಾರೆ. ಹೀಗಾಗಿ ಅವರ ಮೇಲೆ ಯಾವುದೇ ಸಂಶಯ ಅಥವಾ ಅಪನಂಬಿಕೆಯಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತತ್ವ ಸಿದ್ದಾಂತಗಳಿಗೆ ತಿಲಾಂಜಲಿ ನೀಡಲು ಎಳ್ಳಷ್ಟು ಹಿಂದೆ ಮುಂದೆ ನೋಡುವುದಿಲ್ಲ. ಬಿಜೆಪಿಯವರು ಹತಾಷೆಗೊಂಡು ಭಾವನಾತ್ಮಕ ವಿಚಾರಗಳ ಮೂಲಕ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಮಂಡ್ಯ ಧ್ವಜ ವಿಚಾರದಲ್ಲಿ ಸರಕಾರ ಯಾವುದೇ ವಿವಾದ ಸೃಷ್ಟಿಸಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿ ನಾಯಕರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next