Advertisement

ಪ್ರತಿಪಕ್ಷಗಳ ಟೀಕೆಗೆ ಮಹತ್ವ ಬೇಡ: ಸವದಿ

11:11 PM Jan 04, 2020 | Team Udayavani |

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ತುಮಕೂರು ಕಾರ್ಯಕ್ರಮ ಕುರಿತು ವಿರೋಧ ಪಕ್ಷಗಳ ನಾಯಕರ ಟೀಕೆಗೆ ಹೆಚ್ಚು ಮಹತ್ವ ನೀಡುವುದು ಬೇಡ. ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷವನ್ನು ಹೊಗಳಲು ಸಾಧ್ಯವೇ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಶ್ನಿಸಿದರು. ನಗರದಲ್ಲಿ ಮಾತನಾಡಿದ ಅವರು, ಸಂವಿಧಾನ ಬಗ್ಗೆ ಪ್ರಧಾನಿಯಾಗಿ ಮಕ್ಕಳಿಗೆ ಜಾಗೃತಿ ಮೂಡಿಸಿದ್ದರಲ್ಲಿ ತಪ್ಪೇನಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರಿಗೆ ತಿಳಿವಳಿಕೆ ಕೊಟ್ಟಿದ್ದೇವೆ.

Advertisement

ದೇಶದ ಸಂವಿಧಾನ ಬಗ್ಗೆ ಮನವರಿಕೆ ಮಾಡಿಕೊಡುವ ಕರ್ತವ್ಯವನ್ನು ಪ್ರಧಾನಿ ಮಾಡಿದ್ದಾರೆ. ರಾಜಕೀಯಕ್ಕಾಗಿ ವಿಪಕ್ಷಗಳ ನಾಯಕರು ಅನೇಕ ಟೀಕೆ-ಟಿಪ್ಪಣೆ ಮಾಡುತ್ತಾರೆ. ಅವುಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಡಿಸಿಎಂ ಸ್ಥಾನಗಳ ಬಗ್ಗೆ ಚರ್ಚೆಯಾಗುತ್ತಿರುವ ಕುರಿತು ಹಾದಿ-ಬೀದಿಯಲ್ಲಿ ಮಾತಾಡೋದಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಆಗುತ್ತೆ. ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next