Advertisement

ನೆಗೆಟಿವ್‌ ವರದಿ ಇದ್ದರೆ ಮಾತ್ರ ಜಿಲ್ಲೆಗೆ ಪ್ರವೇಶ

08:38 PM Apr 26, 2021 | Girisha |

ವಿಜಯಪುರ : ವಿಜಯಪುರ ಜಿಲ್ಲೆ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿದೆ. ಸೋಂಕಿನ ಪ್ರಮಾಣ ಹೆಚ್ಚಾಗಿರುವ ಆ ರಾಜ್ಯದಿಂದ ವಿಜಯಪುರ ಜಿಲ್ಲೆಗೆ ಬರುವರಿಗೆ ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿ ದಾಖಲೆ ತರುವಂತೆ ತಾಕೀತು ಮಾಡಲಾಗಿದೆ ಎಂದು ಕೋವಿಡ್‌ ನಿಯಂತ್ರಣ ಚಟುವಟಿಕೆಯ ವಿಜಯಪುರ ಉಸ್ತುವಾರಿ ಅಧಿಕಾರಿಯಾಗಿರುವ ಎಡಿಜಿಪಿ ಭಾಸ್ಕರರಾವ್‌ ಹೇಳಿದರು.

Advertisement

ರವಿವಾರ ವಿಜಯಪುರ ಜಿಲ್ಲೆಯ ಕೋವಿಡ್‌ ಪರಿಸ್ಥಿತಿ ನಿರ್ವಹಣೆಯಲ್ಲಿ ಪೊಲೀಸರ ಸ್ಥಿತಿಗತಿ ಕುರಿತು ಜಿಲ್ಲೆಯ ಪೊಲೀಸ್‌ ಅ ಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಿಂದ ಬರುವರ ಮೇಲೆ ನಿಗಾ ಇಡಲು ಗಡಿಯಲ್ಲಿ ತೆರೆದಿರುವ ಚೆಕ್‌ಪೋಸ್‌ rಗಳಲ್ಲಿ ನೆಗೆಟಿವ್‌ ವರದಿಗಳಿದ್ದವರಿಗೆ ಮಾತ್ರ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಕ್ರಮ ಸಮರ್ಪಕವಾಗಿ ನಿರ್ವಹಣೆ ಆಗುತ್ತಿದೆ ಎಂದರು.

ಕೋವಿಡ್‌ ಪರಿಸ್ಥಿತಿ ನಿರ್ವಹಣೆ ಸಂದರ್ಭದಲ್ಲಿ ಪೊಲೀಸರು ಕರ್ತವ್ಯದಲ್ಲಿದ್ದಾಗಲೂ ಕೋವಿಡ್‌ ಸೋಂಕು ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕರ್ತವ್ಯ ನಿರ್ವಹಿಸಬೇಕಿದೆ. ಜೀವ-ಜೀವನ ಎರಡು ರಕ್ಷಣೆ ಆಗಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸರಳವಾದ ಕರ್ಫ್ಯೂ ಜಾರಿ ಮಾಡಿದೆ, ಜನತೆ ಸರ್ಕಾರದ ನಿಯಮ ಪಾಲಿಸಿ ಕೋವಿಡ್‌ ರೋಗದಿಂದ ರಕ್ಷಿಸಿಕೊಳ್ಳಲು ಜನರೂ ಕರ್ತವ್ಯ ನಿರತ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು. ರಾಜ್ಯದಲ್ಲಿ ಸರಳವಾದ ಕರ್ಫ್ಯೂ ನಿಯಮ ಜಾರಿಯಲ್ಲಿದೆ. ಪ್ರತಿ ಜಿಲ್ಲೆಯ ವ್ಯವಸ್ಥೆಯ ಉಸ್ತುವಾರಿಗೆ ಸರ್ಕಾರ ಹಿರಿಯ ಅ ಧಿಕಾರಿಗಳನ್ನು ನೇಮಿಸಿದೆ. ನನಗೆ ಈ ಭಾಗದ ಉಸ್ತುವಾರಿ ನೀಡಿದ್ದು, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಗಳ ಭೇಟಿ ಬಳಿಕ ವಿಜಯಪುರ ಜಿಲ್ಲೆಯ ಪರಿಸ್ಥಿತಿ ಅವಲೋಕನ ನಡೆಸಿದ್ದೇನೆ. ನಾಳೆ ಬಾಗಲಕೋಟೆ ಜಿಲ್ಲೆಗೆ ಭೇಟಿ ಬಳಿಕ ಈ ಭಾಗದ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು. ಕೋವಿಡ್‌ ಸೋಂಕು ನಿಗ್ರಹಕ್ಕಾಗಿ ಕರ್ಫ್ಯೂ ಜಾರಿಗೆ ತಂದಿದ್ದರೂ ಜನರ ಹಿತದೃಷ್ಟಿಯಿಂದ ಅನೇಕ ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ.

ಮತ್ತೂಂದೆಡೆ ಎರಡನೇ ಅಲೆಯ ವೇಗ ತಗ್ಗಿಸಿ ಸೋಂಕಿನ ಕೊಂಡಿ ಕಳಚುವ ಕುರಿತು ಸರ್ಕಾರದೊಂದಿಗೆ ಸಹಕರಿಸಲು ಜನರೂ ಮುಂದಾಗಿದ್ದಾರೆ. ಕರ್ಫ್ಯೂ ಸಂದರ್ಭದಲ್ಲಿ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್‌ ಮಾಡಿ ಮನೆಗಳಲ್ಲಿ ಉಳಿದಿದ್ದಾರೆ. ಜನರು ಕೂಡ ನಿಯಮ ಪಾಲಿಸುವ ಮೂಲಕ ಸಹಕರಿಸುತ್ತಿದ್ದಾರೆ. ಒಂದೊಮ್ಮೆ ಲಾಕ್‌ಡೌನ್‌ ಮಾಡಿದ್ದರೆ ಆರ್ಥಿಕ ಪರಿಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರಿ, ಜನ ಜೀವನ ಕಷ್ಟವಾಗಲಿತ್ತು ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದರು. ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿಯೂ ಸಹ ಜನರ ಮೇಲೆ ಯಾವುದೇ ರೀತಿ ಬಲ ಪ್ರಯೋಗ, ಪೊಲೀಸ್‌ ಬಲವಂತದ ಕ್ರಮಗಳು ನಡೆಯುತ್ತಿಲ್ಲ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೊಲೀಸರು ಮನವೊಲಿಸುವ ಕೆಲಸ ಮಾಡುವಲ್ಲಿ ಯಶಸ್ವಿಯಾಗಿದ್ದರಿಂದ ವ್ಯಾಪಾರಿಗಳೇ ಸ್ವಯಂ ಪ್ರೇರಿತವಾಗಿ ವಹಿವಾಟು ಬಂದ್‌ ಮಾಡಿದ್ದು, ಜನರೂ ಅನಗತ್ಯವಾಗಿ ಮನೆಗಳಿಂದ ಹೊರ ಬರದೇ ಸಹಕರಿಸಲು ಕಾರಣವಾಗಿದೆ ಎಂದರು. ಈಗಾಗಲೇ ಹಳ್ಳಿಗಳಲ್ಲಿಯೂ ಕೊರೊನಾ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಗ್ರಾಮೀಣ ಭಾಗದಲ್ಲಿ ಇನ್ನಷ್ಟೂ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುವುದು ಎಂದು ವಿವರಿಸಿದರು. ಎಸ್ಪಿ ಅನುಪಮ್‌ ಅಗರವಾಲ್‌, ಎಎಸ್‌ಪಿ ಡಾ| ಶ್ರೀರಾಮ ಅರಸಿದ್ಧಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next