Advertisement

ಅಟ್ಟಾರಿ-ವಾಘಾ ಗಡಿಯಲ್ಲಿ “ಈದ್” ಸಿಹಿ ಸ್ವೀಕರಿಸಲು ಪಾಕ್ ಗಡಿ ಭದ್ರತಾ ಪಡೆ ನಕಾರ!

10:14 AM Aug 13, 2019 | Nagendra Trasi |

ಜಮ್ಮು-ಕಾಶ್ಮೀರ:ಅಟ್ಟಾರಿ-ವಾಘಾ ಗಡಿಯಲ್ಲಿ ಕೆಲವು ವಿಶೇಷ ಸಂದರ್ಭಗಳಲ್ಲಿ ಭಾರತದ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮತ್ತು ಪಾಕಿಸ್ತಾನದ ರೇಂಜರ್ಸ್ ನಡುವೆ ಸಿಹಿತಿಂಡಿ ವಿನಿಮಯ ಮಾಡಿಕೊಳ್ಳುವುದು ಸಂಪ್ರದಾಯ. ಆದರೆ ಈ ಬಾರಿ ಈದ್ ಸಂಭ್ರಮದ ಹಿನ್ನೆಲೆಯಲ್ಲಿ ಬಿಎಸ್ ಎಫ್ ನೀಡಿದ ಸಿಹಿ ತಿಂಡಿಯನ್ನು ಸ್ವೀಕರಿಸಿ, ಶುಭಾಶಯ ವಿನಿಮಯ ಮಾಡಿಕೊಳ್ಳಲು ಪಾಕ್ ರೇಂಜರ್ಸ್ ನಿರಾಕರಿಸಿದ್ದಾರೆ!

Advertisement

ಈ ಬಾರಿಯ ಈದ್ ಹಬ್ಬದ ವೇಳೆ ಸಿಹಿ ತಿಂಡಿಯಾಗಲಿ ಅಥವಾ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವುದಿಲ್ಲ ಎಂದು ಪಾಕ್ ರೇಂಜರ್ಸ್ ತಿಳಿಸಿರುವುದಾಗಿ ಬಿಎಸ್ ಎಫ್ ನ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಬಿಎಸ್ ರಾವತ್ ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡುತ್ತ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯವನ್ನು ಇಬ್ಭಾಗ ಮಾಡಿ, ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಭಾರತ ಸರಕಾರ ಘೋಷಿಸಿತ್ತು. ಬಳಿಕ ಪಾಕಿಸ್ತಾನ ಭಾರತದ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಅಸಮಾಧಾನದ ಹಿನ್ನೆಲೆಯಲ್ಲಿ ಪಾಕಿಸ್ತಾನ ಸಂಜೋತ ಎಕ್ಸ್ ಪ್ರೆಸ್ ರೈಲು ಸೇವೆ, ಲಾಹೋರ್ ದಿಲ್ಲಿ ಬಸ್ ಸೇವೆಯನ್ನೂ ಕೂಡಾ ಸ್ಥಗಿತಗೊಳಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Advertisement

Udayavani is now on Telegram. Click here to join our channel and stay updated with the latest news.

Next