Advertisement

ಸಿಎಎ ಬಗ್ಗೆ ಭಯ ಬೇಡ: ಮೋದಿ

10:04 AM Feb 22, 2020 | Team Udayavani |

ನವದೆಹಲಿ: ಸಿಎಎ ಮತ್ತು ಎನ್‌ಪಿಆರ್‌ ಬಗ್ಗೆ ಯಾರೂ ಭಯ ಪಡಬೇಕಾದ ಅಗತ್ಯವಿಲ್ಲ. ಯಾರನ್ನೂ ದೇಶದಿಂದ ಹೊರಗಟ್ಟುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭರವಸೆ ನೀಡಿದ್ದಾರೆ.

Advertisement

ಸಿಎಂ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಧವ್‌ ಮತ್ತು ಪುತ್ರ ಆದಿತ್ಯ ಠಾಕ್ರೆ ಶುಕ್ರವಾರ ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್‌, ಪ್ರಧಾನಿ ಮೋದಿ ಜತೆ ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ.

ಸಿಎಎ-ಎನ್‌ಪಿಆರ್‌ ಕುರಿತೂ ಮಾತುಕತೆ ನಡೆಸಿದ್ದೇನೆ. ಅದರ ಬಗ್ಗೆ ಯಾರೂ ಭಯ ಪಡಬೇಕಾಗಿಲ್ಲ. ಸಿಎಎ ವಿಚಾರದಲ್ಲಿ ಕೆಲವರು ಜನರನ್ನು ಸುಖಾಸುಮ್ಮನೆ ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ. ಜತೆಗೆ, ಮಹಾ ವಿಕಾಸ್‌ ಅಘಾಡಿಯಲ್ಲಿ ಭಿನ್ನಮತವೂ ಇಲ್ಲ, ನಮ್ಮ ಸರ್ಕಾರ 5 ವರ್ಷ ಪೂರೈಸಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next