Advertisement

ಫೆ.22ರ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಿಂಸೆ ನಡೆದಿಲ್ಲ:ಕೇಂದ್ರ

06:58 AM Feb 27, 2019 | Team Udayavani |

ಹೊಸದಿಲ್ಲಿ : ಕಳೆದ ಫೆ.22ರ ಬಳಿಕ ಯಾವುದೇ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಿಂಸೆ ನಡೆದಿಲ್ಲ ಎಂದು ಕೇಂದ್ರ ಸರಕಾರ ಇಂದು ಸುಪ್ರೀಂ ಕೋರ್ಟಿಗೆ ತಿಳಿಸಿತು.

Advertisement

ದೇಶದ ವಿವಿಧೆಡೆ ಇರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಿಂಸಾ ಘಟನೆಗಳು ನಡೆಯುತ್ತಿದ್ದು ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸೂಕ್ತ ನಿರ್ದೇಶ ನೀಡಬೇಕೆಂದು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಸುಪ್ರೀಂ ಕೋರ್ಟಿಗೆ ಕೇಂದ್ರ ಸರಕಾರ ಈ ವಿಷಯ ತಿಳಿಸಿದೆ. 

ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರು ಸಲ್ಲಿಸಿದ ಕೇಂದ್ರದ ಈ ಉತ್ತರವನ್ನು ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಸ್ವೀಕರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next