Advertisement

ನಾವು ಲಾಕ್ ಡೌನ್ ಮಾಡುವ ಪ್ರಮೇಯವಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

12:42 PM Apr 13, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಮೇಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ವಿಪಕ್ಷದವರ ಜೊತೆ ಸಭೆ ಮಾಡಿ, ಅವರ ಸಲಹೆಯನ್ನೂ ಪಡೆಯುತ್ತೇವೆ. ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರಿಗೆ ಯಾವ ಕಾರಣಕ್ಕೂ ಸಂಬಳ ನೀಡುವುದಿಲ್ಲ. ಕೆಲಸ ಮಾಡಿದವರಿಗೆ ಮಾತ್ರ ವೇತನ ನೀಡಲಾಗುವುದು. ಅವರು ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಯಾರನ್ನೂ ಕರೆದು ಮಾತಾಡುವ ಪ್ರಮೆಯವೇ ಇಲ್ಲ ಎಂದರು.

ಉಪ ಚುನಾವಣೆಯ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ವೈ, ಎರಡು ವಿಧಾನಸಭೆ ಚುನಾವಣಾ ಪ್ರಚಾರ ಮುಗಿಸಿ ಬಂದಿದ್ದೇನೆ. ನಾಳೆ ಹನ್ನೆರಡು ಗಂಟೆ ಮೇಲೆ ಬೆಳಗಾವಿ ಗೋಕಾಕ್ ತೆರಳುತ್ತೇನೆ. ಮೂರು ಕ್ಷೇತ್ರ ಉಪಚುನಾವಣೆ ಗೆಲ್ಲುವ ಭರವಸೆಯಿದೆ. ಇಪ್ಪತ್ತು ಸಾವಿರ ಅಂತರದ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನತೆಗೆ ಯುಗಾದಿ ಹಬ್ಬದ ಶುಭ ಕೋರಿದ ಸಿಎಂ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಷಯಗಳು. ರಾಜ್ಯದ ಜನತೆಗೆ ಸಂಪತ್ತು, ನೆಮ್ಮದಿ ಸಿಗಲಿ. ಸಕಾಲಕ್ಕೆ ಮಳೆ-ಬೆಳೆಯಾಗಲಿ ಎಂದು ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next