Advertisement

ಭವಿಷ್ಯದ ಮೇಲೆ ಸರ್ಕಾರ ನಡೆಯಲ್ಲ: ಜಗದೀಶ ಶೆಟ್ಟರ್‌

09:54 AM Sep 21, 2019 | Team Udayavani |

ಬಾಗಲಕೋಟೆ : ಯಾವುದೇ ಸರ್ಕಾರ ಭವಿಷ್ಯದ ಮೇಲೆ ನಡೆಯಲ್ಲ. ಕೆಲವರು ಮೂರು ತಿಂಗಳು ಅಂದರೆ,ಇನ್ನೂ ಕೆಲವರು ಐದು ವರ್ಷ ಎಂದು ಹೇಳುತ್ತಾರೆ. ಹೀಗಾಗಿ ಬಿಜೆಪಿ ಸರ್ಕಾರ ಭವಿಷ್ಯದ ಮೇಲೆ ನಡೆಯಲ್ಲ ಎಂದು ಮಾಜಿ ಸಿಎಂ,ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

Advertisement

ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರದ ಕುರಿತು ಕೋಡಿಹಳ್ಳಿ ಶ್ರೀಗಳು ನುಡಿದ ಭವಿಷ್ಯದ ಕುರಿತ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಬಿಜೆಪಿ ಸರ್ಕಾರ ಮೂರು ತಿಂಗಳಲ್ಲಿ ಬೀಳುತ್ತದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಐದು ವರ್ಷ ಎಂದು ಹೇಳುತ್ತಾರೆ. ಇದಕ್ಕೇನು ಎನ್ನುತ್ತೀರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next