Advertisement

ಸೇವಾಶುಲ್ಕ: ಸಿಎಸ್‌ಗಳು ಕ್ರಮ ಕೈಗೊಳ್ಳಲಿ

12:08 PM Jul 08, 2022 | Team Udayavani |

ನವದೆಹಲಿ: ರೆಸ್ಟೋರೆಂಟ್‌ಗಳಲ್ಲಿ ಮತ್ತು ಹೋಟೆಲ್‌ಗ‌ಳಲ್ಲಿ ಸರ್ವಿಸ್‌ ಚಾರ್ಜ್‌ ವಿಧಿಸುತ್ತಿರುವ ಬಗ್ಗೆ ಎದ್ದಿರುವ ಗೊಂದಲಗಳ ಪರಿಹಾರಕ್ಕೆ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ)  ಸೂಚನೆ ನೀಡಿದೆ.

Advertisement

ಜತೆಗೆ ಹೊಸ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದೂ ತಿಳಿಸಿದೆ. ಇದಲ್ಲದೆ, ಸಿಸಿಪಿಎ ದೇಶದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕೂಡ ಈ ಬಗ್ಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದು, ಗ್ರಾಹಕರ ಹಕ್ಕುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿದೆ.

ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಸೇವಾಶುಲ್ಕ ವಿಧಿಸುವಂತಿಲ್ಲವೆಂದು ಜು.4ರಂದು ಸಿಸಿಪಿಎ ಮಾರ್ಗಸೂಚಿ ಬಿಡುಗಡೆ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next