Advertisement

ಕೆಪಿಸಿಸಿ ಅಧ್ಯಕ್ಷರ ನೇಮಕ ಅವಸರವಿಲ್ಲ: ಖರ್ಗೆ

11:13 PM Jan 21, 2020 | Lakshmi GovindaRaj |

ಕಲಬುರಗಿ: ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ನಮಗೇನೂ ಅವಸರವಿಲ್ಲ. ಆದರೆ ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಗೆ ಅವಸರವಿದ್ದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂ ಧಿಸಿದ ಚರ್ಚೆಗಳು ಈಗಾಗಲೇ ಪೂರ್ಣಗೊಂಡಿವೆ.

Advertisement

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಲ್ವರು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ. ಮಹಾರಾಷ್ಟ್ರದಲ್ಲಿ ಐವರು ಕಾರ್ಯಾಧ್ಯಕ್ಷರನ್ನು ನೇಮಿಸಲಾಗಿತ್ತು. ಕರ್ನಾಟಕದಲ್ಲಿಯೂ ಈ ಹಿಂದೆ ಇಬ್ಬರು ಕಾರ್ಯಾಧ್ಯಕ್ಷರ ನೇಮಕ ಮಾಡಲಾಗಿತ್ತು. ಸಂದರ್ಭಕ್ಕೆ ತಕ್ಕಂತೆ ಕಾರ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಇದು ಪಕ್ಷದ ಆಂತರಿಕ ವಿಚಾರ.

ಕೆಲವು ನಾಯಕರಲ್ಲಿ ಭಿನ್ನ ನಿಲುವುಗಳಿರಬಹುದು. ಆದರೆ, ಎಲ್ಲರೂ ಪಕ್ಷದ ನಿರ್ಣಯಕ್ಕೆ ಬದ್ಧರಾಗಿರುತ್ತೇವೆ ಎಂದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಪ್ರಕರಣ ಬಗ್ಗೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರ ತಕ್ಷಣ ತನಿಖಾ ಸಂಸ್ಥೆಗೆ ಸೂಕ್ತ ನಿರ್ದೇಶನ ನೀಡಬೇಕು. ಯಾರೇ ತಪ್ಪಿತಸ್ಥರಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next