Advertisement

ರಾಜ್ಯದಲ್ಲಿ ಸದ್ಯಕ್ಕೆ ತರಾತುರಿಯಲ್ಲಿ ಶಾಲೆ ಆರಂಭ ಮಾಡಲ್ಲ: ಸಚಿವ ಸುರೇಶ್ ಕುಮಾರ್

01:37 PM Oct 01, 2020 | keerthan |

ಬೆಂಗಳೂರು: ಅನ್ ಲಾಕ್ 5ರ ಮಾರ್ಗದರ್ಶಿಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಆದರೆ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ಯಾವುದೇ ಧಾವಂತವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Advertisement

ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿದ ಸಚಿವರು, ಸದ್ಯ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಸ್ಥಿತಿ ಇಲ್ಲ. ಮಕ್ಕಳ ಆರೋಗ್ಯವೇ ನಮ್ಮ ಆದ್ಯತೆ ಎಂದಿದ್ದಾರೆ.

ಸದ್ಯಕ್ಕಂತೂ ತರಾತುರಿಯಲ್ಲಿ ಶಾಲೆಗಳನ್ನು ಆರಂಭ ಮಾಡಿಲ್ಲ. ಈ ಬಗ್ಗೆ ಸರ್ಕಾರ ಇದುವರೆಗೆ ತೀರ್ಮಾನ ಮಾಡಿಲ್ಲ. ಪೋಷಕರು, ಶಿಕ್ಷಣ ತಜ್ಞರುಗಳ ಜೊತೆಗೆ ಚರ್ಚೆ ನಡೆಸುತ್ತೇವೆ. ಅಕ್ಟೋಬರ್ ಎರಡನೇ ವಾರದಲ್ಲಿ ತೀರ್ಮಾನ ತಿಳಿಸುತ್ತೇವೆ ಎಂದರು.

ಇದನ್ನೂ ಓದಿ:ಅಕ್ಟೋಬರ್‌ 15ರ ವರೆಗೆ ಶಾಲೆಗಿಲ್ಲ ಮಕ್ಕಳ ಭೇಟಿ

ಕೇಂದ್ರದ ಮಾರ್ಗಸೂಚಿಯಲ್ಲೇನಿದೆ?

Advertisement

ಶಾಲೆಗಳನ್ನು ಆರಂಭಿಸುವ ಬಗ್ಗೆ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿ ಆಯಾ ರಾಜ್ಯ ಸರಕಾರಗಳೇ ನಿರ್ಧಾರ ಕೈಗೊಳ್ಳಬೇಕು. ಹೆತ್ತವರ ಲಿಖಿತ ಒಪ್ಪಿಗೆ ಇದ್ದರೆ ಮಾತ್ರ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವುದಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ತರಗತಿಗೆ ವಿದ್ಯಾರ್ಥಿಗಳು ಹಾಜರಾಗಲೇ ಬೇಕು ಎಂದು ಆಯಾ ಶಿಕ್ಷಣ ಸಂಸ್ಥೆಗಳು ಒತ್ತಡ ಹೇರುವಂತಿಲ್ಲ. ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌ ಮೂಲಕ ಪಾಠ ಪ್ರವಚನ ಬಯಸಿದ್ದರೆ ಅಂಥವರು ತರಗತಿಗೆ ಹಾಜರಾಗಲೇಬೇಕೆಂದು ಒತ್ತಡ ಹೇರುವಂತಿಲ್ಲ ಎಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next