Advertisement

ಬಜೆಟ್; ರಾಜಕೀಯ ಪಕ್ಷಗಳಿಗೆ ಶಾಕ್, ನಗದು ವ್ಯವಹಾರ ಮಿತಿ 3 ಲಕ್ಷ ರೂ.

01:05 PM Feb 01, 2017 | Team Udayavani |

ನವದೆಹಲಿ: 2017-18ನೇ ಸಾಲಿನ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಬುಧವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಡಿಜಿಟಲ್ ಇಂಡಿಯಾಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅಲ್ಲದೇ ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ರೈಲ್ವೆ ಬಜೆಟ್ ಅನ್ನು ಸಾಮಾನ್ಯ ಬಜೆಟ್ ಜೊತೆ ವಿಲೀನಗೊಳಿಸಿ ಮಂಡಿಸಲಾಗಿದೆ.

Advertisement

ಈ ಬಾರಿಯ ಬಜೆಟ್ ನಲ್ಲಿ ರಾಜಕೀಯ ಪಕ್ಷಗಳಿಗೆ ಬಿಗ್ ಶಾಕ್ ಕೊಡಲಾಗಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಒಬ್ಬ ವ್ಯಕ್ತಿ 2 ಸಾವಿರ ರೂಪಾಯಿಗಿಂತ ಹೆಚ್ಚು ದೇಣಿಗೆ ನೀಡಿದರೆ ಆತನ ವಿವರ ಕೊಡುವುದು ಕಡ್ಡಾಯ ಎಂದು ಹೇಳಿದೆ.

ಅಲ್ಲದೇ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಸಂಬಂಧ ಕೇಂದ್ರ ನಿಯಮ ರೂಪಿಸಿದ್ದು, 2 ಸಾವಿರ ರೂಪಾಯಿ ಮಾತ್ರ ನಗದಿನಲ್ಲಿ ಪಾವತಿಸಬಹುದಾಗಿದೆ. 2 ಸಾವಿರಕ್ಕಿಂತ ಹೆಚ್ಚು ದೇಣಿಗೆಯನ್ನು ಚೆಕ್ ಅಥವಾ ಡಿಜಿಟಲ್ ಮಾದರಿಯಲ್ಲಿಯೇ ಪಾವತಿ ಮಾಡಬೇಕು.

ಜನಸಾಮಾನ್ಯರಿಗೆ ಆದಾಯ ತೆರಿಗೆ ಹೊರೆ ಅರ್ಧ ಇಳಿಕೆ!
2017ರ ಸಾಲಿನ ಬಜೆಟ್ ನಲ್ಲಿಯೂ ಕೇಂದ್ರ ಸರ್ಕಾರ ಆದಾಯ ತೆರಿಗೆ ಮಿತಿ ಏರಿಕೆ ಮಾಡಿಲ್ಲ. 2.5 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ.  .ಆದರೆ ಆದಾಯ ತೆರಿಗೆ ದರ ಶೇ.10ರಿಂದ ಶೇ.5ಕ್ಕೆ ಇಳಿಸಿದೆ. 2.5ಲಕ್ಷದಿಂದ 5 ಲಕ್ಷದವರೆಗೆ ಶೇ.5ರಷ್ಟು ತೆರಿಗೆ, 5 ಲಕ್ಷದಿಂದ ಶೇ.10ಲಕ್ಷದವರೆಗೆ ಶೇ.20ರಷ್ಟು ತೆರಿಗೆ. ಹಿರಿಯ ನಾಗರಿಕರಿಗೆ 3ಲಕ್ಷದಿಂದ 3.5ಲಕ್ಷದವರೆಗೆ ಆದಾಯ ತೆರಿಗೆ ಮಿತಿ ಏರಿಕೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next