Advertisement

BJP ಯೊಂದಿಗೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ: ಶಾ ಭೇಟಿ ಬಳಿಕ ಎಚ್.ಡಿ.ಕುಮಾರಸ್ವಾಮಿ

07:13 PM Feb 23, 2024 | Team Udayavani |

ಬೆಂಗಳೂರು: ”ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ, ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಮೈತ್ರಿಕೂಟ ಗೆಲ್ಲಬೇಕು ಎಂಬುದು ನಮ್ಮ ಉದ್ದೇಶವಾಗಿದೆ” ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.

Advertisement

ಪುತ್ರ ನಿಖಿಲ್ ಅವರೊಂದಿಗೆ ಗುರುವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂ ಪಕ್ಷಗಳು ಒಟ್ಟಾಗಿ ನಿರ್ಧಾರ ಕೈಗೊಳ್ಳಲಿವೆ ಎಂದು ಹೇಳಿದ್ದಾರೆ.

ಇನ್ನೂ ನಿರ್ಧರಿಸಿಲ್ಲ
ಡಾ.ಮಂಜುನಾಥ್ ಅವರು ಚುನಾವಣೆಗೆ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ “ರಾಜ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಅವರ ಸೇವೆಯ ಬಗ್ಗೆ ಎಲ್ಲರಿಗೂ ಸಕಾರಾತ್ಮಕ ಅಭಿಪ್ರಾಯವಿದೆ, ಅದರ ಆಧಾರದ ಮೇಲೆ ಕೆಲವರು ಅವರನ್ನು ರಾಜಕೀಯಕ್ಕೆ ಕರೆ ತರುವ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಸಮಯ ಬಂದಾಗ ನೋಡೋಣ” ಎಂದರು.

ಡಿ.ಕೆ. ಸುರೇಶ್ ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಂಜುನಾಥ್ ಅವರನ್ನು ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ತೀವ್ರ ಊಹಾಪೋಹಗಳಿವೆ.ಕೆಲವು ವರದಿಗಳ ಪ್ರಕಾರ, ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆಯ ಆಧಾರದ ಮೇಲೆ ಅವರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಬಹುದು ಎನ್ನಲಾಗಿದೆ.

ಫೆಬ್ರವರಿ 27 ರಂದು ತಿಳಿಯಲಿದೆ
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಿ ಕುಪೇಂದ್ರ ರೆಡ್ಡಿ ಅವರ ಗೆಲುವಿನ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ” ನಾವೆಲ್ಲರೂ ಗುರಿಯನ್ನು ಗೆಲ್ಲುವ ಹಂಬಲದಿಂದ ಯಾವುದೇ ಕೆಲಸ ಮಾಡುತ್ತೇವೆ. ಆಸೆ ಈಡೇರುತ್ತದೋ ಇಲ್ಲವೋ ಎಂಬುದು ಫೆಬ್ರವರಿ 27 ರಂದು ನಡೆಯುವ ಮತದಾನದ ನಂತರ ತಿಳಿಯಲಿದೆ ಎಂದರು.

Advertisement

ಮೈತ್ರಿಕೂಟಕ್ಕೆ ನಾಲ್ಕರಲ್ಲಿ ಒಂದನ್ನು ಮಾತ್ರ ಗೆಲ್ಲುವ ಸಾಮರ್ಥ್ಯವಿದ್ದರೂ ಬಿಜೆಪಿ-ಜೆಡಿ(ಎಸ್) ಮೈತ್ರಿ ರೆಡ್ಡಿ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ವಾಯ್ಸ್ ರೆಸ್ಟ್ ಗೆ ಸಲಹೆ
ಹೆಚ್ಚು ಮಾತನಾಡಬೇಡಿ ಎಂದು ವೈದ್ಯರು ಸಲಹೆ ನೀಡಿದ್ದರಿಂದ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಬೊಕ್ಕಸ ಖಾಲಿ
ಇತ್ತೀಚಿಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರಿಯಾಗಿಸಿಕೊಂಡು ರಾಜ್ಯಕ್ಕೆ ಕೇಂದ್ರದ ಅನುದಾನಕ್ಕೆ ಒತ್ತಾಯಿಸಿ ಭಾಷಣ ಮಾಡಿರುವುದು ರಾಜ್ಯದ ಘನತೆಯನ್ನು ಕೆಡವಿದ್ದಾರೆ.
ಸಿಎಂ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಕರ್ನಾಟಕ ಶ್ರೀಮಂತ ರಾಜ್ಯವಾಗಿದ್ದು, ಸ್ವಂತ ತೆರಿಗೆ ಆದಾಯಕ್ಕೆ ಬಂದರೆ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಹಣದ ಕೊರತೆ ಇಲ್ಲ. ನಿಮ್ಮ ಲೂಟಿಯ ದಾಹ ನೀಗಿಸಿಕೊಳ್ಳಲು ರಾಜ್ಯದ ಬೊಕ್ಕಸವನ್ನು ಖಾಲಿ ಮಾಡುತ್ತಿದ್ದೀರಿ. ಖಜಾನೆ ಖಾಲಿಯಾಗುತ್ತಿರುವುದು ಖಾತರಿ ಯೋಜನೆಗಳಿಂದಲ್ಲ. ರಾಜ್ಯ ಸರಕಾರ ನಿರಂತರವಾಗಿ ಕೇಂದ್ರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next