Advertisement

ಬ್ಯಾಂಕ್ ವಿಲೀನದಿಂದ ಉದ್ಯೋಗ ನಷ್ಟವಿಲ್ಲ: ನಿರ್ಮಲ ಭರವಸೆ

10:27 AM Sep 02, 2019 | Team Udayavani |

ಚೆನ್ನೈ: ಸಾರ್ವಜನಿಕ ರಂಗದ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯ ಕಾರಣದಿಂದ ಒಂದೇ ಒಂದು ಉದ್ಯೋಗ ನಷ್ಟವಾಗುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ನೀಡಿದ್ದಾರೆ.

Advertisement

ಬ್ಯಾಂಕುಗಳ ವಿಲೀನದಿಂದ ಉದ್ಯೋಗ ಕಡಿತವಾಗುತ್ತದೆ ಎಂಬುದು ಸಂಪೂರ್ಣವಾಗಿ ತಪ್ಪು ಮಾಹಿತಿಯಷ್ಟೇ. ಶುಕ್ರವಾರದಂದು ನಾನು ಏನು ಹೆಳಿದ್ದೇನೆ ಎಂಬುದನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಾಗಿ ವಿನಂತಿ ಹಾಗೂ ಇದೇ ಭರವಸೆಯನ್ನು ನಾನು ಈ ಬ್ಯಾಂಕುಗಳ ಎಲ್ಲಾ ಸಂಘಟನೆಗಳಿಗೆ ನೀಡಲುಬಯಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಉದ್ಯೋಗ ನಷ್ಟ ಕಾರಣವನ್ನು ಮುಂದಿಟ್ಟುಕೊಂಡು ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬ್ಯಾಂಕ್ ಉದ್ಯೋಗಿಗಳ ಸಂಘಟನೆಗಳ ನಡೆಯ ಕುರಿತಾಗಿರುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ವಿತ್ತ ಸಚಿವೆ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ದೇಶದ 10 ಸಾರ್ವಜನಿಕ ರಂಗದ ಬ್ಯಾಂಕುಗಳನ್ನು ವಿಲೀನಗೊಳಿಸಿ ನಾಲ್ಕು ಬ್ಯಾಂಕುಗಳನ್ನಾಗಿ ಮಾಡುವ ಮಹತ್ವದ ಯೋಜನೆಯನ್ನು ಶುಕ್ರವಾರದಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನಾವರಣಗೊಳಿಸಿದ್ದರು. ಇದರಿಂದ ಕುಸಿಯುತ್ತಿರುವ ದೇಶೀಯ ಆರ್ಥಿಕತೆಗೆ ಬಲ ಬರಲಿದೆ ಎಂದು ಸರಕಾರದ ವಿಶ್ವಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next