Advertisement

ಯಾವುದೇ ಕಾನೂನು ವಾಪಸ್‌ ಪಡೆಯಲ್ಲ: ಜೋಶಿ

11:08 PM Mar 01, 2020 | Team Udayavani |

ಬಳ್ಳಾರಿ: “ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದಾಗಿ ಯಾರಿಗೂ ಯಾವುದೇ ತೊಂದರೆಯಿಲ್ಲ. ಸರ್ಕಾರ ಯಾವುದೇ ಕಾನೂನನ್ನೂ ವಾಪಸ್‌ ಪಡೆಯಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ನಗರದಲ್ಲಿ ಭಾನುವಾರ ಭಾರತೀಯ ಮಜ್ದೂರ್‌ ಸಂಘ ಏರ್ಪಡಿಸಿದ್ದ ಸಂಘದ ಸಂಸ್ಥಾಪಕ ದತ್ತೋಪಂಥ ಠೇಂಗಡಿ ಅವರ ಜನ್ಮ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದರು.

Advertisement

ಪೌರತ್ವ ಕಾಯ್ದೆ ತಿದ್ದುಪಡಿಯಿಂದ ದೇಶದ ವಾಸಿಗಳಿಗೆ ಯಾವ ತೊಂದರೆಯೂ ಇಲ್ಲ. ಆದರೆ ಜನರನ್ನು ದಾರಿ ತಪ್ಪಿಸುವ ಸಲುವಾಗಿ ಸಿಎಎ, ಎನ್‌ಆರ್‌ಸಿ ಬಗ್ಗೆ ಸುಳ್ಳು ಪ್ರಚಾರ ಮಾಡ ಲಾಗುತ್ತಿದೆ. ಕಾಂಗ್ರೆಸ್‌ ಸೇರಿ ಇತರೆ ಪಕ್ಷಗಳ ಕುಮ್ಮಕ್ಕಿನಿಂದಾಗಿ ಪಾಕ್‌ ಪರ ಘೋಷಣೆ, ಪಾಕಿಸ್ತಾನ್‌ ಜಿಂದಾಬಾದ್‌ ಎನ್ನು ವುದನ್ನು ಮಾಡಿದರೆ ಅವರನ್ನೂ ಪಾಕಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗುತ್ತದೆ ಎಂದರು.

ಲೇಬರ್‌ ಕೋಡ್‌ ಬಿಲ್‌: ಯಾವುದೇ ಕಾಯ್ದೆಗಳನ್ನು ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ. ದೇಶದ್ರೋಹಿಗಳ ವಿರುದ್ಧ ಎಲ್ಲರೂ ಸದಾ ಎಚ್ಚರಿಕೆಯಿಂದ ಇರಬೇಕು. ಇನ್ನು ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರದಲ್ಲಿ ಲೇಬರ್‌ ಕೋಡ್‌ ಬಿಲ್‌ ಅನ್ನು ತರಲಾಗುತ್ತಿದೆ ಎಂದೂ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next