Advertisement

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

12:19 AM Oct 26, 2024 | Shreeram Nayak |

ಶಿವಮೊಗ್ಗ: ರಾಜ್ಯದಲ್ಲಿ ಎಸ್‌. ಬಂಗಾರಪ್ಪನವರ ಕಾಲದಿಂದ ಇಲ್ಲಿನವರೆಗೂ ಯಾವುದೇ ಹೊಸ ಮದ್ಯದ ಅಂಗಡಿಗೆ ಪರವಾನಿಗೆ ನೀಡಿಲ್ಲ. ಜನಸಂಖ್ಯೆ ಹೆಚ್ಚಾಗಿದೆ. ಕೆಲವು ಕಡೆ ಮದ್ಯ ಸಿಗದ ಕಾರಣ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಕೆಲವು ಸಿಎಲ್‌-2 ಶಾಪ್‌ಗ್ಳಿವೆ, ಎಂಎಸ್‌ಐಎಲ್‌ ಮಳಿಗೆಗಳಿವೆ. ಇವರು ಮಾರುಕಟ್ಟೆ ಮಾಡುತ್ತಿದ್ದಾರೆ. ಅಂಗಡಿಗಳಲ್ಲಿ ಕುಳಿತುಕೊಂಡು ಕುಡಿಯಲು ಅವಕಾಶ ಇಲ್ಲ. ಇದರಿಂದ ಕೆಲವರು ಅಂಗಡಿಗಳಿಂದ ತೆಗೆದುಕೊಂಡು ಹೋಗಿ ಕುಡಿಯುತ್ತಾರೆ. ಅಕ್ರಮ ಮದ್ಯ ಮಾರಾಟ ತಡೆಗೆ ಪೊಲೀಸ್‌ ಕ್ರಮ ಕೈಗೊಳ್ಳಬೇಕು. ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ತಡೆಗೆ ಗಮನ ಹರಿಸುತ್ತೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next