Advertisement

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

01:19 PM Apr 16, 2021 | Team Udayavani |

ಬೆಂಗಳೂರು: ನಗರದಲ್ಲಿ ಕೋವಿಡ್-19 ಸೋಂಕು ತಡೆಗೆ ಈ ಹಿಂದೆ ‌ರೂಪಿಸಿಕೊಂಡಿದ್ದ ಯೋಜನೆಗಳನ್ನೇ ಮುಂದುವರಿಸಲಾಗುವುದು. ಸಾಧ್ಯವಾದಷ್ಟು ಶೀಘ್ರವಾಗಿ ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು‌.

Advertisement

ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೊರೊನಾ ಸೋಂಕು ಉಲ್ಬಣಿಸುತ್ತಿದೆ. ಈ ಸಂದರ್ಭದಲ್ಲಿ ಪಾಲಿಕೆ ಮತ್ತು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ವರ್ಗ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ನಗರದ ಪ್ರತಿ ವಾರ್ಡ್ ನಲ್ಲಿ ಜ್ವರ ತಪಾಸಣಾ ಕೇಂದ್ರ ಪ್ರಾರಂಭಿಸಲಾಗುವುದು. ವಿಧಾನಸಭಾ ಕ್ಷೇತ್ರವಾರು ಸಹ ವಾರ್ ರೂಮ್ ಪ್ರಾರಂಭಿಸಲಾಗುವುದು ಎಂದರು.

ನಗರದಲ್ಲಿ ಲಾಕ್ ಡೌನ್ ಇಲ್ಲ: ನಗರದಲ್ಲಿ ಲಾಕ್ ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.‌ ನಗರದಲ್ಲಿರುವವರು ನಿತ್ಯದ ದುಡಿಮೆಯನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ಸದ್ಯಕ್ಕೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಸರ್ಕಾರ ಪರಿಸ್ಥಿತಿ ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next