Advertisement

ರಾಮ ಮಂದಿರ ಸ್ಫೋಟ ಸಂಚು ಆಘಾತಕಾರಿ: ಈಶ್ವರಪ್ಪ

08:39 PM Oct 21, 2022 | Team Udayavani |

ಶಿವಮೊಗ್ಗ: ರಾಮ ಮಂದಿರ ಸ್ಫೋಟ ಸಂಚು ವಿಚಾರವೇ ಹಿಂದೂ ಸಮಾಜಕ್ಕೆ ದೊಡ್ಡ ಆಘಾತಕಾರಿ ವಿಷಯವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಬಹುದಿನದ ಹಿಂದೂ ಸಮಾಜದ ಕನಸು ರಾಮಮಂದಿರ ನಿರ್ಮಾಣ ಮಾಡುವ ಮೂಲಕ ನನಸಾಗುತ್ತಿದೆ. ಬಹಳ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ಸ್ಫೋಟ ಸಂಚಿನಲ್ಲಿ ರಾಷ್ಟ್ರದ್ರೋಹಿ ಸಂಘಟನೆ ಪಿಎಫ್‌ಐ ಪ್ರಯತ್ನ ಬೆಳಕಿಗೆ ಬಂದಿದೆ. ಪಿಎಫ್‌ಐಯವರಷ್ಟೇ ಅಲ್ಲ, ರಾವಣನ ವಂಶಸ್ಥರು, ಜಿನ್ನಾ ವಂಶಸ್ಥರು ಬಂದರೂ ಅದು ಆಗಲ್ಲ. ಇದು ಯಾವುದನ್ನೂ ಕನಸಿನಲ್ಲೂ ನೆನೆಸಿಕೊಳ್ಳುವುದು ಬೇಡ.

ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ನಂಬಿಕೆ ಇರುವ ಪ್ರತಿಯೊಬ್ಬರೂ ಪಿಎಫ್‌ಐ ಹೇಳಿಕೆ ಖಂಡನೆ ಮಾಡಬೇಕು. ಕಾಂಗ್ರೆಸ್‌, ಜೆಡಿಎಸ್‌, ಕಮ್ಯುನಿಸ್ಟ್‌ ಎಲ್ಲರೂ ಖಂಡಿಸಬೇಕು. ಇದನ್ನು ಖಂಡಿಸದಿದ್ದರೆ ಅವರು ಅಯೋಗ್ಯರು ಎಂದರು.

ನಟ ಚೇತನ್‌ ಯಾರು, ಆತನ ಮುಖವನ್ನೇ ನಾನು ನೋಡಿಲ್ಲ. ಆತನ ಯಾವ ಸಿನಿಮಾವನ್ನೂ ನೋಡಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡಲು ಆತ ಯಾರು? ರಾಜ್ಯದಲ್ಲಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಎಲ್ಲಿಯೇ ನಿಂತರೂ ಸೋಲುತ್ತಾರೆ. ಅವರ ಅಧಿಕಾರಾವಧಿಯಲ್ಲಿ ಸಾಕಷ್ಟು ಹಿಂದೂ ಯುವಕರ ಕಗ್ಗೊಲೆ ನಡೆದಿದೆ. ಹಿಂದೂ ಧರ್ಮ ವಿರೋಧಿ  ನೀತಿಯೇ ಅವರನ್ನು ಸೋಲಿಸುತ್ತದೆ ಎಂದು ಈಶ್ವರಪ್ಪ ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next