Advertisement

ಅತ್ಯಾಚಾರ ಆರೋಪಿಗಳ ಕ್ಷಮಾದಾನ ಅರ್ಜಿ ಪರಿಗಣಿಸುವುದೇ ಇಲ್ಲ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್

09:57 AM Dec 07, 2019 | Nagendra Trasi |

ನವದೆಹಲಿ: ದಿಶಾ ಅತ್ಯಾಚಾರ ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದ ಘಟನೆ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿರುವ ನಡುವೆಯೇ ಪೋಸ್ಕೋ ಕಾಯ್ದೆಯಡಿ ದಾಖಲಾದ ಅತ್ಯಾಚಾರ ಪ್ರಕರಣದ ಆರೋಪಿಗಳ ಕ್ಷಮಾದಾನ ಅರ್ಜಿಯನ್ನು ಪರಿಗಣಿಸುವುದೇ ಇಲ್ಲ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ತಿಳಿಸಿದ್ದಾರೆ.

Advertisement

ಮಹಿಳೆಯರ ರಕ್ಷಣೆ ತುಂಬಾ ಗಂಭೀರವಾದ ವಿಷಯವಾಗಿದೆ. ಪೋಸ್ಕೋ ಕಾಯ್ದೆಯಡಿ ಅತ್ಯಾಚಾರ ಆರೋಪಿಗಳಾಗಿರುವವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಅಧಿಕಾರವೇ ಇಲ್ಲ. ಇಂತಹ ಕ್ಷಮಾದಾನ ಅರ್ಜಿಗಳನ್ನು ಸಂಸತ್ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ಕೋವಿಂದ್ ಶುಕ್ರವಾರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

2012ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿನ ಆರೋಪಿಯೊಬ್ಬ ಸಲ್ಲಿಸಿರುವ ಕ್ಷಮಾದಾನ ಅರ್ಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಬಳಿ ಬಾಕಿ ಉಳಿದಿದ್ದು ಸಂದರ್ಭದಲ್ಲಿಯೇ ಈ ಪ್ರತಿಕ್ರಿಯೆ ನೀಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next