Advertisement

ಇನ್ನೆರಡು ದಿನ ಕಾಯಲು ಬೇಸರವಿಲ್ಲ: ಬಿ.ಸಿ.ಪಾಟೀಲ

11:39 PM Jan 27, 2020 | Team Udayavani |

ಹಾವೇರಿ: ಇಷ್ಟು ದಿನ ಕಾದಿದ್ದೇವೆ. ಇನ್ನೆರಡು ದಿನ ಕಾಯಲು ನಮಗೆ ಬೇಸರವಿಲ್ಲ ಎಂದು ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ ಹೇಳಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರ ಇನ್ನು ಎರಡ್ಮೂರು ದಿನಗಳಲ್ಲಿ ಬಗೆಹರಿಯಲಿದೆ.

Advertisement

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಎಚ್‌.ವಿಶ್ವನಾಥ ಅವರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವರಿಗೆ ಸಚಿವ ಸ್ಥಾನ ಕೊಡಬಾರದೆಂದು ಯಾರೂ ಹೇಳಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿಜೆಪಿ ಸರ್ಕಾರವನ್ನು ಬೆಂಬಲಿಸಿ 17 ಶಾಸಕರು ರಾಜೀನಾಮೆ ನೀಡಿದ್ದು,

ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಸೋತವರು-ಗೆದ್ದವರು ಎಂಬ ವಿಷಯ ಬರಲ್ಲ. ಬಿಜೆಪಿಗೆ ಸೇರ್ಪಡೆಯಾದಾಗಿನಿಂದ ನಾವು ಆ ಪಕ್ಷದವರೇ. ಹಾಗಾಗಿ, ಇಲ್ಲಿ ಮೂಲ ಮತ್ತು ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ನಾನು ಇಂತಹ ಖಾತೆಯನ್ನೇ ಕೊಡಿ ಎಂದು ಕೇಳಿಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ಧ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next