Advertisement

ಪ್ಲೀಸ್‌ ಅಮೂಲ್‌ ಉತ್ಪನ್ನಗಳನ್ನು ಬಹಿಷ್ಕರಿಸಬೇಡಿ; ಕನ್ನಡಿಗರಿಗೆ ಗುಜರಾತ್‌ ಸಿಎಂ ಮನವಿ

09:26 PM Apr 18, 2023 | Team Udayavani |

ಗಾಂಧಿನಗರ:”ಅಮೂಲ್‌ ಯಾರ ಮೇಲೆ ಕೂಡ ಸವಾರಿ ಮಾಡುವ ಉದ್ದೇಶ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಜನರು ಸಂಸ್ಥೆಯ ಉತ್ಪನ್ನಗಳನ್ನು ಬಹಿಷ್ಕರಿಸಬಾರದು’ ಎಂದು ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಮನವಿ ಮಾಡಿದ್ದಾರೆ.

Advertisement

ಕರ್ನಾಟಕದಲ್ಲಿ ಅಮೂಲ್‌ ಹಾಲು ಮಾರಾಟ ಮಾಡುವ ಬಗ್ಗೆ ವಿವಾದಗಳು ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

“ಅಮುಲ್‌ ಸಂಸ್ಥೆ ಏನನ್ನಾದರೂ ದೋಚುತ್ತಿದ್ದರೆ ಪ್ರತಿಭಟನೆ ನಡೆಸುತ್ತಿರುವುದು ಸಹಜವಾಗಿ ಇರುತ್ತಿತ್ತು. ಆದರೆ, ಪರಿಸ್ಥಿತಿ ಹಾಗಿಲ್ಲ. ಸಂಸ್ಥೆಯ ಉತ್ಪನ್ನಗಳನ್ನು ಬಹಿಷ್ಕರಿಸಬಾರದು. ಜತೆಗೆ ಯಾರ ಮೇಲೆ ಕೂಡ ಸವಾರಿ ಮಾಡುವ ಉದ್ದೇಶ ಇಲ್ಲ’ ಎಂದು ಭೂಪೇಂದ್ರ ಪಟೇಲ್‌ ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಅಮುಲ್‌ ಉತ್ಪನ್ನಗಳನ್ನು ವಿರೋಧಿಸಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಕೆಎಂಎಫ್ ಅನ್ನು ಅಮೂಲ್‌ ಅನ್ನು ವಿಲೀನಗೊಳಿಸಲಾಗುತ್ತದೆ ಎಂಬ ವದಂತಿಯ ಬಗ್ಗೆ ಕಾಂಗ್ರೆಸ್‌, ಜೆಡಿಎಸ್‌ ಮತ್ತು ಕನ್ನಡಪರ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next