Advertisement

ಸ್ಪೀಕರ್‌ ಮೇಲೆ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ: ಬಿಎಸ್‌ವೈ

11:30 PM Jul 07, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಏನು ಹೇಳುತ್ತಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಹೇಳುತ್ತಾರೆ, ಬೇರೆಯವರು ಏನು ಹೇಳುತ್ತಾರೋ ಅದಕ್ಕೆಲ್ಲಾ ನಾನು ಉತ್ತರ ನೀಡುವುದಿಲ್ಲ. ಆದರೆ, ಸ್ಪೀಕರ್‌ ಬಗ್ಗೆ ಅಪಾರ ಗೌರವವಿದ್ದು, ಅವರ ಬಗ್ಗೆ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುವುದಿಲ್ಲ. ಅದು ನನಗೆ ಸಂಬಂಧವಿಲ್ಲದ ವಿಷಯ ಎಂದು ತಿಳಿಸಿದರು.

ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್‌ ಅವರು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಲಿದ್ದಾರೆ. ಅವರ ಮೇಲೆ ಅಪಾರ ಗೌರವವಿದೆ. ಅವರು ಈ ವಿಚಾರದಲ್ಲಿ ಮಾದರಿ ಸ್ಪೀಕರ್‌ ಆಗಿ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ.
-ಆರ್‌.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ

ಆಪರೇಷನ್‌ ಕಮಲ ಎಂದು ಆರೋಪಿಸುವ ಮೂಲಕ ರಾಜೀನಾಮೆ ನೀಡಿದ ಹಿರಿಯ ನಾಯಕರಿಗೆ ಮೈತ್ರಿ ಸರ್ಕಾರ ಅವಮಾನ ಮಾಡುತ್ತಿದೆ. ಮೈತ್ರಿ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ನಾವು ಆಪರೇಷನ್‌ ಕಮಲಕ್ಕೆ ಕೈ ಹಾಕಿಲ್ಲ. ಆ ರೀತಿ ಹೇಳುವ ಮೂಲಕ ರಾಮಲಿಂಗಾರೆಡ್ಡಿ, ಎಚ್‌.ವಿಶ್ವನಾಥ್‌ರಂತಹ ಹಿರಿಯರಿಗೆ ಅವಮಾನ ಮಾಡಬಾರದು.
-ಎಂ.ಪಿ.ರೇಣುಕಾಚಾರ್ಯ, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next