Advertisement

ಮುಸ್ಲಿಮರಿಗೆ ಭೂಮಿ ನೀಡಬೇಕಾಗಿಲ್ಲ: ಸುಪ್ರೀಂಗೆ ಹಿಂದೂ ಮಹಾಸಭಾ ಅರ್ಜಿ

10:12 AM Dec 11, 2019 | Team Udayavani |

ಹೊಸದಿಲ್ಲಿ: ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆಂದು ಐದು ಎಕರೆ ಜಮೀನು ನೀಡಬೇಕಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಹಿಂದೂ ಮಹಾಸಭಾ ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದೆ.

Advertisement

ನ.9ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್‌ ಗೊಗೋಯ್‌ ನೇತೃತ್ವದ ನ್ಯಾಯಪೀಠ 2.77 ಎಕರೆ ಜಮೀನು ರಾಮ ಲಲ್ಲಾನಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಅಯೋಧ್ಯೆ ಸುತ್ತಮುತ್ತ ಐದು ಎಕರೆ ಜಮೀನನ್ನು ಮುಸ್ಲಿಮರಿಗೆ ನೀಡಬೇಕೆಂದು ತೀರ್ಪು ನೀಡಿತ್ತು.

ಈಗ ಮಸೀದಿ ನಿರ್ಮಿಸಲು ಜಮೀನು ನೀಡುವುದನ್ನು ಪ್ರಶ್ನಿಸಿ ಇದೇ ಮೊದಲ ಬಾರಿಗೆ ಹಿಂದೂ ಸಮುದಾಯದಿಂದ ಅರ್ಜಿ ಸಲ್ಲಿಕೆಯಾಗಿದೆ. ತೀರ್ಪಿನಲ್ಲಿ ಉಲ್ಲೇಖವಾಗಿರುವಂತೆ ವಿವಾದಿತ ಜಮೀನಿನ ಆಸುಪಾಸು ಹಿಂದೂಗಳಿಗೆ ಸೇರಿದ್ದು ಎಂದಿರುವಾಗ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕವಾಗಿ ಐದು ಎಕರೆ ಜಮೀನು ನೀಡ ಬೇಕಾದ ಅಗತ್ಯವಿಲ್ಲ ಎಂದು ಹಿಂದೂ ಮಹಾಸಭಾದ ನ್ಯಾಯವಾದಿ ವಿಷ್ಣು ಶಂಕರ್‌ ಹೇಳಿದ್ದಾರೆ. ಈ ಅರ್ಜಿಯಿಂದಾಗಿ ನ.9ರ ತೀರ್ಪು ವಿರುದ್ಧ ಒಟ್ಟು 7 ಅರ್ಜಿಗಳು ಸಲ್ಲಿಕೆಯಾ ದಂತಾಗಿವೆ. ಈಗಾಗಲೇ ಮುಸ್ಲಿಂ ಸಮುದಾಯದಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next