Advertisement

ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಅಗತ್ಯವಿಲ್ಲ: ಬಿಎಸ್‌ವೈ

10:04 PM Oct 13, 2021 | Team Udayavani |

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಯಕ್ತಿಯವಾಗಿ ಭೇಟಿ ಮಾಡಿಲ್ಲ. ವಯಕ್ತಿಕವಾಗಿ ಅವರನ್ನು ಭೇಟಿಯಾಗುವ ಅನಿವಾರ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, 2020ರ ಫೆಬ್ರವರಿ 27 ರಂದು ನನ್ನ ಜನ್ಮದಿನದ ಕಾರ್ಯಕ್ರಮ ಹೊರತುಪಡೆಸಿ, ಸಿದ್ದರಾಮಯ್ಯ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಿಲ್ಲ.ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ.

ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಗುರಿ ತಲುಪುವ ತನಕ ನಾನು ವಿರಮಿಸುವುದಿಲ್ಲ. ನಂಬಿದ ಸಿದ್ದಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗುವುದಿಲ್ಲ. ಹಾಗೆಯೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:500 ಕೆ.ಜಿ.ಚಿನ್ನ ಈಗಲೇ ಕರಗಿಸಿದ್ದೇವೆ: ಮದ್ರಾಸ್‌ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರ ಮಾಹಿತಿ

Advertisement

Udayavani is now on Telegram. Click here to join our channel and stay updated with the latest news.

Next