Advertisement

ಭಯ ಬೇಡ; ಝಿಕಾ ನಿಯಂತ್ರಣದಲ್ಲಿದೆ

08:50 AM Oct 10, 2018 | Team Udayavani |

ಹೊಸದಿಲ್ಲಿ: ರಾಜಸ್ಥಾನದ ಜೈಪುರದಲ್ಲಿ ಝಿಕಾ ವೈರಸ್‌ ಸೋಂಕು ವ್ಯಾಪಕವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನಸಾಮಾನ್ಯರು ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಈವರೆಗೆ 29 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

Advertisement

ನಮ್ಮ ಮೇಲ್ವಿಚಾರಣೆ ವ್ಯವಸ್ಥೆ ಸುಸ್ಥಿರವಾಗಿದ್ದುದರಿಂದ ಆರಂಭದಲ್ಲೇ ಪತ್ತೆಯಾಗಿದೆ. ಪ್ರಸ್ತುತ ಸನ್ನಿವೇಶವನ್ನು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ, ಇತರ ಸಂಸ್ಥೆಗಳು ಮೇಲ್ವಿಚಾರಣೆ ನಡೆಸುತ್ತಿವೆ ಎಂದಿದ್ದಾರೆ. ಸೋಂಕಿಗೆ ಸಂಬಂಧಿಸಿ ಸಮಗ್ರ ವರದಿ ನೀಡುವಂತೆ ಸೋಮವಾರ ಪ್ರಧಾನಿ ಕಾರ್ಯಾಲಯವು ಆರೋಗ್ಯ ಸಚಿವಾಲಯವನ್ನು ಕೇಳಿತ್ತು. ಏಳು ಜನರ ಉನ್ನತ ಅಧಿಕಾರಿಗಳ ತಂಡವು ಜೈಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸನ್ನಿವೇಶ ನಿಯಂತ್ರಣ ಹಾಗೂ ನಿರ್ವಹಣೆಯಲ್ಲಿ ತೊಡಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next