Advertisement

ವೈದ್ಯರ ಮುಷ್ಕರ: ನಾಳೆ ಒಪಿಡಿ ಸೇವೆ ಇಲ್ಲ

10:36 AM Jun 16, 2019 | keerthan |

ಮಂಗಳೂರು/ಉಡುಪಿ: ಪ. ಬಂಗಾಲ ದಲ್ಲಿ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಕರೆಯಂತೆ ಜೂ. 17ರ ಬೆಳಗ್ಗೆ 6 ಗಂಟೆಯಿಂದ ಜೂ. 18ರ ಬೆಳಗ್ಗೆ 6 ಗಂಟೆಯ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ ಕಾರ್ಯ ನಿರ್ವಹಿಸುವುದಿಲ್ಲ.

Advertisement

ಭಾರತೀಯ ವೈದ್ಯಕೀಯ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಡಾ| ಗುರುಮೂರ್ತಿ ಭಟ್‌ ಮತ್ತು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ಅಧ್ಯಕ್ಷ ಡಾ| ಬಿ. ಸಚ್ಚಿದಾನಂದ ರೈ ಈ ವಿಚಾರ ತಿಳಿಸಿದ್ದಾರೆ.

ಮಂಗಳೂರು ಮತ್ತು ಉಡುಪಿಯ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಜೂ. 17ರ ಬೆಳಗ್ಗೆ 6ರಿಂದ 18ರ ಬೆಳಗ್ಗೆ 6 ಗಂಟೆಯ ವರೆಗೆ ಬಂದ್‌ ನಡೆಯಲಿದ್ದು, ಒಪಿಡಿ ಸಹಿತ ಯಾವುದೇ ಸೇವೆ ಲಭ್ಯವಿರುವುದಿಲ್ಲ. ಆಸ್ಪತ್ರೆಗಳ ಮೆಡಿಕಲ್‌ ಅಂಗಡಿಗಳಲ್ಲಿಯೂ ಸೇವೆ ಇರದು. ಆದರೆ ತುರ್ತು ಸೇವೆಗಳಿಗೆ ವಿನಾಯಿತಿ ಇದೆ ಎಂದವರು ವಿವರಿಸಿದ್ದಾರೆ.

ಮಣಿಪಾಲ ಆಸ್ಪತ್ರೆ, ಉಡುಪಿ ಮತ್ತು ಕಾರ್ಕಳದ ಡಾ| ಟಿಎಂಎ ಪೈ ಆಸ್ಪತ್ರೆ ಗಳಲ್ಲಿಯೂ ಒಪಿಡಿ ಸೇವೆ ಇರುವುದಿಲ್ಲ. ಆದರೆ ತುರ್ತುಚಿಕಿತ್ಸೆ ಇರಲಿವೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ವೈದ್ಯರ ಮುಷ್ಕರಕ್ಕೆ ಎರಡೂ ಜಿಲ್ಲೆಗಳ ಆಯುಷ್‌ ಫೌಂಡೇಶನ್‌ ಘಟಕಗಳು ಬೆಂಬಲ ವ್ಯಕ್ತಪಡಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next