Advertisement

ಒಮಿಕ್ರಾನ್‌ ಆತಂಕ ಇಲ್ಲ: ಸಚಿವ ಡಾ.ಕೆ.ಸುಧಾಕರ್‌

08:46 PM Dec 17, 2021 | Team Udayavani |

ಬೆಳಗಾವಿ: ರಾಜ್ಯದಲ್ಲಿ ಎಂಟು ಮಂದಿಗೆ ಒಮಿಕ್ರಾನ್‌ ಪತ್ತೆಯಾಗಿದ್ದು ಪರೀಕ್ಷೆ ಮಾಡಿ ಅವರ ಮೂಲಕ ಬೇರೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ತಾಂತ್ರಿಕ ಸಲಹಾ ಸಮಿತಿ ಜತೆಯೂ ಸಭೆ ನಡೆಸಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬ ಸಲಹೆ ಪಡೆಯುತ್ತೇವೆ. ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಸಾರ್ವಜನಿಕರು ಸಹ ಎಚ್ಚರವಹಿಸಬೇಕು ಎಂದು ಹೇಳಿದರು.

ಸಚಿವ ಬೈರತಿ ಬಸವರಾಜ್‌ ವಿಚಾರದಲ್ಲಿ ಕಾಂಗ್ರೆಸ್‌ ಷಡ್ಯಂತ್ರ್ಯ ಮಾಡುತ್ತಿರಬಹುದು. 13 ವರ್ಷದ ಹಿಂದೆ ಬಸವರಾಜ್‌ ಪರವಾಗಿಯೇ ತೀರ್ಪು ಬಂದಿತ್ತು. ಹೈಕೋರ್ಟ್‌ನಲ್ಲೂ ಪ್ರಕರಣ ಬಾಕಿ ಇದೆ. ಪ್ರತಿಪಕ್ಷ ನಾಯಕರು ಹೇಳಿದಂತೆ ಚರ್ಚೆಗೆ ಅವಕಾಶ ಕೊಡಲು ಬರಲ್ಲ. ಅದೇ ವಿಚಾರ ಅವರಿಗೆ ತಿಳಿಸಿದ್ದೇನೆ ಅಷ್ಟೇ ಎಂದರು.

ಇದನ್ನೂ ಓದಿ:ದೆಹಲಿ: ಮಹಿಳೆಯನ್ನು ಸ್ಕೂಟರ್ ನಲ್ಲೇ ರಸ್ತೆಯುದ್ದಕ್ಕೂ ಎಳೆದೊಯ್ದ ಕಳ್ಳರು

ರಮೇಶ್‌ಕುಮಾರ್‌ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಎರಡು ಬಾರಿ ಸ್ಪೀಕರ್‌ ಆಗಿದ್ದು, ಮೌಲ್ಯಗಳಿಗೆ ರಾಯಭಾರಿ ಆಗಿದ್ದವರು. ನನಗೆ ಅವರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ, ಆದರೆ ಅವರು ಮುಖವಾಡ ಹಾಕಿಕೊಂಡು ಬದುಕುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next