Advertisement

ಮಸ್ಕಿ ‘ಕೈ’ ಮೇಲು : ಯಾರೂ ಸಂಭ್ರಮಾಚರಣೆ ಮಾಡಬೇಡಿ : ಕಾರ್ಯಕರ್ತರಲ್ಲಿ ಡಿಕೆಶಿ ಮನವಿ

02:53 PM May 02, 2021 | Team Udayavani |

ಬೆಂಗಳೂರು : ನಾವು ಮಸ್ಕಿಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದೇವೆ. ನಾವು ನೀವೆಲ್ಲಾ ಫಲಿತಾಂಶ ನೋಡುತ್ತಿದ್ದೇವೆ. ಸೋಲನ್ನು ಒಪ್ಪಬೇಕು. ಗೆಲುವನ್ನು ಒಪ್ಪಬೇಕು. ಇದು ಪ್ರಜಾಪ್ರಭುತ್ವದ ನಿಯಮವಾಗಿದೆ. ಕಾರ್ಯಕರ್ತರು ಯಾರೂ ಸಂಭ್ರಮ ಮಾಡಬಾರದು ಕೋವಿಡ್ ನಿಯಮ ಪಾಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. 

Advertisement

ಉಪ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಡಿಕೆಶಿ, ಮಸ್ಕಿಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದೇವೆ. ಮಸ್ಕಿ ಕ್ಷೇತ್ರದ ಅಭ್ಯರ್ಥಿ ತುರುವಿಹಾಳ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ. ಯಾರೂ ಸಂಭ್ರಮ ಮಾಡದಂತೆ ಸೂಚನೆ ನೀಡಿದ್ದೇನೆ ಎಂದರು.

ಇನ್ನು ಹೊರ ರಾಜ್ಯದ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,  ಬಿಜೆಪಿ ಸೋಲು, ಡಿಎಂಕೆ ಗೆಲವು ಯಾವುದನ್ನು ಸಂಭ್ರಮಿಸುವುದು ಬೇಡ. ಮಮತಾ ಬ್ಯಾನರ್ಜಿ ಅವರಿಗೆ ಕೊಡಬಾರದ ಕಾಟ ಕೊಟ್ಟರು. ಆ ಶೋಷಣೆ ಇದೆಯಲ್ಲ ಹೇಳಬಾರದು. ಇಷ್ಟಾದರೂ ಪಶ್ಚಿಮ ಬಂಗಾಳದ ಜನ ಮಮತಾ ಕೈ ಹಿಡಿದಿದ್ದಾರೆ ಎಂದರು.

ಸಿದ್ದರಾಮಯ್ಯ ಧನ್ಯವಾದ : ಮಸ್ಕಿ ಕ್ಷೇತ್ರದ ಜನತೆಗೆ ಧನ್ಯವಾದಗಳು. ಬೆಳಗಾವಿ ಗೆಲ್ಲುವ ಭರವಸೆ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next