Advertisement

ಕರ್ನಾಟಕ ಲಾಕ್ ಡೌನ್ ಗೂ ಜನರ ನಿರ್ಲಕ್ಷ್ಯ: ಸಿಎಂ ತವರು ಜಿಲ್ಲೆಯ ಮಾರುಕಟ್ಟೆಯಲ್ಲಿ ಜನ ಜಂಗುಳಿ

11:11 AM Mar 27, 2020 | keerthan |

ಶಿವಮೊಗ್ಗ: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕರ್ನಾಟಕ ಲಾಕ್ ಡೌನ್ ಗೆ ಆದೇಶಿಸಿದ್ದಾರೆ. ಆದರೆ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಆದೇಶದ ಉಲ್ಲಂಘನೆಯಾಗುತ್ತಿದೆ.

Advertisement

ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡು ಬಂದಿದೆ.

ಒಂದೇ ಕಡೆ ಹೆಚ್ಚು ಜನರು ಸೇರಬಾರದು ಎಂಬ ಆದೇಶವಿದ್ದರೂ ಜನರು ತರಕಾರಿ ಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ಧಾರೆ. ಕನಿಷ್ಟ ಅಂತರವೂ ಇರದೇ ಜನರು ಒಂದೇ ಕಡೆ ಮುಗಿಬಿದ್ದಿದ್ದಾರೆ.

ಮನೆಯಿಂದ ಹೊರಬರಬೇಡಿ ಎಂದು ಸರಕಾರ ನಿರ್ಬಂಧ ಹೇರಿದ್ದರೂ ಜನರು ಯುಗಾದಿ ನೆಪದಲ್ಲಿ ಮಾರುಕಟ್ಟೆಯಲ್ಲಿ ಸುತ್ತಾಡುತ್ತಿರುವುದು ಕಂಡು ಬಂತು.

Advertisement

Udayavani is now on Telegram. Click here to join our channel and stay updated with the latest news.

Next